News Karnataka Kannada
Saturday, May 18 2024
ದೇಶ

13,500 ಕೋಟಿ ರೂ. ವೆಚ್ಚದ ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ

Rs 13,500 crore. PM lays foundation stone for cost-effective project
Photo Credit : News Kannada

ಮಹಬೂಬ್‌ನಗರ: ತೆಲಂಗಾಣದಲ್ಲಿ 13,500 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಅಲ್ಲದೆ ಹಲವು ಕಾಮಗಾರಿಗಳುನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಕ್ಷೇತ್ರಗಳನ್ನು ಒಳಗೊಂಡ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್, ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್ ಉಪಸ್ಥಿತರಿದ್ದರು.

ನಾಗ್ಪುರ – ವಿಜಯವಾಡ ಆರ್ಥಿಕ ಕಾರಿಡಾರ್‌ನ ಭಾಗವಾಗಿರುವ ಪ್ರಮುಖ ರಸ್ತೆ ಯೋಜನೆಗೆ ಶಿಲಾನ್ಯಾಸ ನೆರವೇರಿಸಿದರು. ಸುಮಾರು 6,400 ಕೋಟಿ ರೂಪಾಯಿಗಳ ಒಟ್ಟು ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಈ ರಸ್ತೆ ಯೋಜನೆ ವಾರಂಗಲ್ ಮತ್ತು ಖಮ್ಮಮ್ ನಡುವಿನ ಪ್ರಯಾಣದ ದೂರವನ್ನು ಸುಮಾರು 14 ಕಿ.ಮೀ. ಮತ್ತು ಖಮ್ಮಂ ಮತ್ತು ವಿಜಯವಾಡ ನಡುವಿನ ಅಂತರವನ್ನು ಸುಮಾರು 27 ಕಿ.ಮೀ. ಕಡಿಮೆ ಮಾಡಲಿದೆ.

ಸುಮಾರು 2,460 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 59 ಕಿಮೀ ಉದ್ದದ ಸೂರ್ಯಪೇಟ್‌ನಿಂದ ಖಮ್ಮಂ ಭಾಗದ NH-365BB ನ ನಾಲ್ಕು ಲೇನಿಂಗ್ ರಸ್ತೆಯನ್ನು ಪ್ರಧಾನಿ ಉದ್ಘಾಟಿಸಿದರು.

ಸುಮಾರು 2,460 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಯೋಜನೆಯು ಹೈದರಾಬಾದ್-ವಿಶಾಖಪಟ್ಟಣಂ ಕಾರಿಡಾರ್‌ನ ಭಾಗವಾಗಿದ್ದು ಭಾರತಮಾಲಾ ಪರಿಯೋಜನಾ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಖಮ್ಮಂ ಜಿಲ್ಲೆ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಿಗೆ ಉತ್ತಮ ಸಂಪರ್ಕವನ್ನು ಒದಗಿಸುತ್ತದೆ.

ಪ್ರಧಾನಿ ಮೋದಿ ಅವರು 37 ಕಿಮೀ ಜಕ್ಲೇರ್-ಕೃಷ್ಣ ಹೊಸ ರೈಲು ಮಾರ್ಗವನ್ನು ಲೋಕಾರ್ಪಣೆ ಮಾಡಿದರು. 500 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಹೊಸ ರೈಲು ಮಾರ್ಗ ವಿಭಾಗವು ಹಿಂದುಳಿದ ಜಿಲ್ಲೆಯಾದ ನಾರಾಯಣಪೇಟೆಯ ಪ್ರದೇಶಗಳಿಗೆ ಮೊದಲ ಬಾರಿಗೆ ರೈಲ್ವೆ ಸಂಪರ್ಕ ಒದಗಿಸಲಿದೆ.

ಪ್ರಧಾನಮಂತ್ರಿಯವರು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೃಷ್ಣಾ ನಿಲ್ದಾಣದಿಂದ ಉದ್ಘಾಟನಾ ಹೈದರಾಬಾದ್ (ಕಾಚೆಗೂಡ) – ರಾಯಚೂರು – ಹೈದರಾಬಾದ್ (ಕಾಚೆಗೂಡ) ರೈಲು ಸೇವೆಗೆ ಚಾಲನೆ ನೀಡಿದರು.

ಈ ರೈಲು ಸೇವೆಯು ತೆಲಂಗಾಣದ ಹೈದರಾಬಾದ್, ರಂಗಾರೆಡ್ಡಿ, ಮಹಬೂಬ್‌ನಗರ, ನಾರಾಯಣಪೇಟ್ ಜಿಲ್ಲೆಗಳನ್ನು ಕರ್ನಾಟಕದ ರಾಯಚೂರು ಜಿಲ್ಲೆಗಳೊಂದಿಗೆ ಸಂಪರ್ಕಿಸುತ್ತದೆ. ಈ ಸೇವೆಯು ಹಿಂದುಳಿದ ಜಿಲ್ಲೆಗಳಾದ ಮಹಬೂಬ್‌ನಗರ ಮತ್ತು ನಾರಾಯಣಪೇಟೆಯ ಹಲವಾರು ಹೊಸ ಪ್ರದೇಶಗಳಿಗೆ ಮೊದಲ ಬಾರಿಗೆ ರೈಲು ಸಂಪರ್ಕವನ್ನು ಒದಗಿಸುತ್ತದೆ, ವಿದ್ಯಾರ್ಥಿಗಳು, ದೈನಂದಿನ ಪ್ರಯಾಣಿಕರು, ಕಾರ್ಮಿಕರು ಮತ್ತು ಸ್ಥಳೀಯ ಕೈಮಗ್ಗ ಉದ್ಯಮಕ್ಕೆ ಈ ಯೋಜನೆ ಪ್ರಯೋಜನ ಉತ್ತೇಜನ ನೀಡಲಿದೆ.

ಪ್ರಧಾನಿ ಮೋದಿ ಅವರು ಹಾಸನ – ಚೆರ್ಲಪಲ್ಲಿ ಎಲ್‌ಪಿಜಿ ಪೈಪ್‌ಲೈನ್ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಸುಮಾರು 2,170 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಎಲ್‌ಪಿಜಿ ಪೈಪ್‌ಲೈನ್, ಕರ್ನಾಟಕದ ಹಾಸನದಿಂದ ಚೆರ್ಲಪಲ್ಲಿ (ಹೈದರಾಬಾದ್‌ನ ಉಪನಗರ) ವರೆಗೆ ಸುರಕ್ಷಿತ, ವೆಚ್ಚ-ಪರಿಣಾಮಕಾರಿ ಮತ್ತು ಪರಿಸರ ಸ್ನೇಹಿ ಎಲ್‌ಪಿಜಿ ಸಾರಿಗೆ ಮತ್ತು ವಿತರಣೆಯ ವಿಧಾನವನ್ನು ಒದಗಿಸುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು