News Karnataka Kannada
Friday, May 10 2024
ದೇಶ

ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಬರಹ: ಸಂಕಷ್ಟಕ್ಕೆ ಸಿಲುಕಿದ ಸಂಜಯ್ ರಾವುತ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದಿರುವುದೇ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಸಂಕಷ್ಟಕ್ಕೆ ಕಾರಣವಾಗಿದೆ. ಇದೀಗ ಸಂಜಯ್ ರಾವುತ್ ವಿರುದ್ಧ ಬಿಜೆಪಿ ನಾಯಕ ನಿತಿನ್ ಅವರು ಯವತ್ಮಾಲ್‌ನ ಉಮರ್ಖೇಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
Photo Credit : News Kannada

ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದಿರುವುದೇ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಸಂಕಷ್ಟಕ್ಕೆ ಕಾರಣವಾಗಿದೆ. ಇದೀಗ ಸಂಜಯ್ ರಾವುತ್ ವಿರುದ್ಧ ಬಿಜೆಪಿ ನಾಯಕ ನಿತಿನ್ ಅವರು ಯವತ್ಮಾಲ್‌ನ ಉಮರ್ಖೇಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪ ಸಂಜಯ್ ರಾವತ್ ಮೇಲಿದೆ. ರಾವತ್ ಅವರು ತಮ್ಮ ಲೇಖನದ ಮೂಲಕ ಪ್ರಧಾನಿಯ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಭೂತಾಡ ಹೇಳಿದ್ದಾರೆ. ಸಂಜಯ್ ರಾವುತ್ ಅವರು ಡಿಸೆಂಬರ್ 11 ರಂದು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಈ ಲೇಖನವನ್ನು ಬರೆದಿದ್ದಾರೆ.

ಸಂಜಯ್ ‘ಸಾಮ್ನಾ’ದ ಸಂಪಾದಕರೂ ಕೂಡಾ ಹೌದು. ಬಿಜೆಪಿಯ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ ಅವರು ‘ಸಾಮ್ನಾ’ ಸಂಪಾದಕ ರಾವುತ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದರ ಆಧಾರದ ಮೇಲೆ ರಾವುತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ), 505 (2) ಮತ್ತು 124 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು