ರಾಜಸ್ಥಾನ: ಇತ್ತೀಚೆಗೆ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಲೇಯಿದೆ. ಇನ್ನು ಕುರಿತಂತೆ ವಿಚಾರಣೆ ಅರ್ಜಿಯೊಂದರ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಕೋಟಾ ಆತ್ಮಹತ್ಯೆ ಪ್ರಕರಣದಲ್ಲಿ ಮಕ್ಕಳ ಪೋಷಕರೇ ಹೊಣೆಗಾರರೆಂದು ಹೇಳಿದೆ.
ಕೋಟಾದಲ್ಲಿ ಮಕ್ಕಳ ಆತ್ಮಹತ್ಯೆ ಪ್ರಮಾಣಕ್ಕೆ ಪೋಷಕರು ಮಾತ್ರ ಕಾರಣ ಎಂದು ಅರ್ಜಿಯೊಂದರ ವಿಚಾರಣೆ ವೇಳೆ ನ್ಯಾಯಾಲಯ ಹೇಳಿದೆ. ಇದರೊಂದಿಗೆ ಕೋಚಿಂಗ್ ಸೆಂಟರ್ಗಳಿಗೆ ಲಗಾಮು ಹಾಕಲು ಕೋರ್ಟ್ ನಿರಾಕರಿಸಿದೆ. ಕೋಟಾದಲ್ಲಿ ಈ ವರ್ಷ ಇಲ್ಲಿಯವರೆಗೆ 24 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೋಷಕರು ತಮ್ಮ ಮಕ್ಕಳಿಂದ ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸುತ್ತಾರೆ. ಇದರಿಂದ ಮಕ್ಕಳು ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ಹೆಜ್ಜೆ ಇಡುತ್ತಾರೆ. ಮಕ್ಕಳ ಆತ್ಮಹತ್ಯೆಗೆ ಕೋಚಿಂಗ್ ಸೆಂಟರ್ಗಳೇ ಕಾರಣ ಎಂದು ಮುಂಬೈ ಮೂಲದ ವೈದ್ಯ ಅನಿರುದ್ಧ್ ನಾರಾಯಣ್ ಮಲ್ಪಾನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.