News Karnataka Kannada
Sunday, May 05 2024
ದೇಶ

ಉಡುಪಿಯ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ ಸೆಹ್ವಾಗ್

ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಉತ್ತೇಜಿಸಿದ ಬೆನ್ನಲ್ಲೇ ಮಾಲ್ಡೀವ್ಸ್ ಖ್ಯಾತೆ ತೆಗೆದಿದೆ. ಹೀಗಾಗಿ ಬಾಲಿವುಡ್ ಸೆಲೆಬ್ರೆಟಿಗಳು, ಕ್ರಿಕೆಟಿಗರು ಹಾಗೂ ಬಹುತೇಕ ಭಾರತೀಯರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಕರೆ ನೀಡಿದ್ದಾರೆ.
Photo Credit : News Kannada

ದೆಹಲಿ: ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಉತ್ತೇಜಿಸಿದ ಬೆನ್ನಲ್ಲೇ ಮಾಲ್ಡೀವ್ಸ್ ಖ್ಯಾತೆ ತೆಗೆದಿದೆ. ಹೀಗಾಗಿ ಬಾಲಿವುಡ್ ಸೆಲೆಬ್ರೆಟಿಗಳು, ಕ್ರಿಕೆಟಿಗರು ಹಾಗೂ ಬಹುತೇಕ ಭಾರತೀಯರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಕರೆ ನೀಡಿದ್ದಾರೆ. ಜೊತೆಗೆ ಭಾರತದ ಅತ್ಯಂತ ಸುಂದರ ತಾಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ಕುರಿತು ಸೆಲೆಬ್ರೆಟಿಗಳು ಟ್ವೀಟ್ ಮಾಡಿದ್ದಾರೆ.

ಇದೀಗ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕರ್ನಾಟಕದ ಉಡುಪಿಯ ತ್ರಾಸಿ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ್ದಾರೆ. ಹೌದು. . ಉಡುಪಿಯ ತ್ರಾಸಿ ಬೀಚ್, ಪಾಂಡಿಚೇರಿಯ ಪ್ಯಾರಡೈಸ್ ಬೀಚ್, ಅಂಡಮಾನ್ ನಿಕೋಬಾರ್‌ನ ನೈಲ್ ಹಾಗೂ ಹ್ಯಾವ್ಲಾಕ್ ಬೀಚ್ ಫೋಟೋಗಳನ್ನು ಸೆಹ್ವಾಗ್ ಹಂಚಿಕೊಂಡಿದ್ದಾರೆ. ಭಾರತದಲ್ಲಿ ಹಲವರು ಅನ್ವೇಷಿಸಿದ ಸ್ಥಳಗಳಿವೆ. ಈ ತಾಣಗಳಿಗೆ ಮೂಲಸೌಕರ್ಯ ಒದಗಿಸಿದರೆ ಯಾವುದಕ್ಕೂ ಕಡಿಮೆ ಇಲ್ಲ. ಪರಿಸ್ಥಿತಿಯನ್ನು ಅವಕಾಶವಾಗಿ ಪರಿವರ್ತಿಸುವುದು ಭಾರತಕ್ಕೆ ತಿಳಿದಿದೆ.

ಮಾಲ್ಡೀವ್ಸ್ ಸಚಿವರು ಭಾರತ ಹಾಗೂ ಪ್ರಧಾನ ಮಂತ್ರಿಯನ್ನು ನಿಂದಿಸಿರುವ ಈ ಸಂದರ್ಭವನ್ನು ಉತ್ತಮ ಅವಕಾಶವಾಗಿ ಬಳಸಿಕೊಂಡು ನಮ್ಮ ಸುಂದರ ಪ್ರವಾಸಿ ತಾಣಗಳಿಗೆ ಮೂಲಭೂತ ಸೌಕರ್ಯ ನೀಡಿ ಆರ್ಥಿಕತೆಯ ವೇಗ ಹೆಚ್ಚಿಸಬೇಕಿದೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಇಷ್ಟೇ ಅಲ್ಲ ಸೆಹ್ವಾಗ್ ಉಡುಪಿ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಉಡುಪಿ ನಿಜಕ್ಕೂ ಅದ್ಭುತ.ಅತ್ಯಂತ ಸುಂದರ ಕಡಲತೀರ, ಪ್ರಾಚೀನ ದೇವಾಲಯ ಹಾಗೂ ಅತ್ಯುತ್ತಮ ಆಹಾರದಿಂದ ಉಡುಪಿ ಅಚ್ಚುಮೆಚ್ಚು ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು