News Karnataka Kannada
Sunday, May 12 2024
ದೇಶ

“ಅರ್ಜುನ ಪ್ರಶಸ್ತಿ” ಸ್ವೀಕರಿಸಿದ ವೇಗದ ಬೌಲರ್ ಮೊಹಮ್ಮದ್ ಶಮಿ

ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ದೇಶದ 2ನೇ ಅತ್ಯುನ್ನತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.
Photo Credit : News Kannada

ದೆಹಲಿ: ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ದೇಶದ 2ನೇ ಅತ್ಯುನ್ನತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.

2023 ರ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಮಿ ಅವರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸ್ಸು ಮಾಡಿತ್ತು. ಅದರಂತೆ ಇದೀಗ ಟೀಮ್ ಇಂಡಿಯಾ ಆಟಗಾರ ಭಾರತದ 2ನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಕೇವಲ 7 ಪಂದ್ಯಗಳನ್ನಾಡಿದ್ದರು. ಈ ವೇಳೆ 10.70 ರ ಸರಾಸರಿಲ್ಲಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದರು. ಶಮಿ ಅವರ  ಈ ಅಮೋಘ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ನಲ್ಲಿ ಫೈನಲ್​ಗೇರಿತ್ತು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು