ಚೆನ್ನೈ: ಶನಿವಾರ ಚೆನ್ನೈನ ಮದ್ರಾಸ್ ಇಂಟರ್ನ್ಯಾಶನಲ್ ಸರ್ಕ್ಯೂಟ್ನಲ್ಲಿ ನಡೆದ ಎಂಆರ್ಎಫ್ ಎಂಎಂಎಸ್ಸಿ ಎಫ್ಎಂಎಸ್ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್ಸೈಕಲ್ ರೇಸಿಂಗ್ ಚಾಂಪಿಯನ್ಶಿಪ್ನ ಮೂರನೇ ಸುತ್ತಿನ ಸ್ಪರ್ಧೆ ವೇಳೆ ಅಪಘಾತಕ್ಕೀಡಾದ ಬೆಂಗಳೂರಿನ 13 ವರ್ಷದ ರೈಡರ್ ಕೊಪ್ಪರಂ ಶ್ರೇಯಸ್ ಹರೀಶ್ ನಿಧನರಾಗಿದ್ದಾರೆ.
ಹರೀಶ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮದ್ರಾಸ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಶನಿವಾರ ಮತ್ತು ಭಾನುವಾರದಂದು ನಿಗದಿಯಾಗಿದ್ದ ಉಳಿದ ರೇಸ್ಗಳನ್ನು ರದ್ದುಗೊಳಿಸಿದೆ. ಈತ ಪೆಟ್ರೋನಾಸ್ ಟಿವಿಎಸ್ ಒನ್-ಮೇಕ್ ಚಾಂಪಿಯನ್ಶಿಪ್ ಹೊಸಬರ ವಿಭಾಗದಲ್ಲಿ ಸ್ಪರ್ಧಿಸಿ ಸತತ ನಾಲ್ಕು ಬಾರಿ ಗೆದ್ದಿದ್ದು ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ರೇಸ್ಗಳನ್ನು ಗೆದ್ದಿದ್ದಾನೆ
ಇಂದು (ಆ.05) ಬೆಳಗ್ಗೆ ಪೋಲ್ ಪೊಸಿಷನ್ಗೆ ಅರ್ಹತೆ ಪಡೆದಿದ್ದ ರೈಡಿಂಗ್ ನಂತರ ಈ ಘಟನೆ ನಡೆದಿದೆ. ಟರ್ನ್-1 ನಿಂದ ನಿರ್ಗಮಿಸಿದ ಶ್ರೇಯಸ್ ಬಿದ್ದು ತಲೆಗೆ ಗಂಭೀರ ಗಾಯವಾಯಿತು. ಆಂಬ್ಯುಲೆನ್ಸ್ನಲ್ಲಿ ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ವರದಿ ಆಗಿದೆ