News Karnataka Kannada
Sunday, April 28 2024
ಸಿಕ್ಕಿಂ

ಮೇಘ ಸ್ಫೋಟಕ್ಕೆ ನಲುಗಿದ ಸಿಕ್ಕಿಂ: ತೀಸ್ತಾ ನದಿಯಲ್ಲಿ 27 ಮೃತದೇಹ ಪತ್ತೆ

Sikkim: 27 bodies recovered from Teesta river
Photo Credit : News Kannada

ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ಪ್ರವಾಹಕ್ಕೆ ಸಿಲುಕಿ 40ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ನಾಪತ್ತೆಯಾಗಿದ್ದ 23 ಸೈನಿಕರಲ್ಲಿ ಏಳು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು ಒಬ್ಬರನ್ನು ರಕ್ಷಿಸಲಾಗಿದೆ. ತೀಸ್ತಾ ನದಿಯಲ್ಲಿ ಈವರೆಗೆ 27 ಮೃತದೇಹ ಪತ್ತೆಯಾಗಿದೆ ಎಂದು ಸಿಕ್ಕಿಂ ಸರ್ಕಾರ ಹೇಳಿದೆ.

ಇನ್ನು ಇಲ್ಲಿಯವರೆಗೆ 2,411 ಸಂತ್ರಸ್ತರನ್ನ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ವಿಕೋಪದಿಂದ ಸುಮಾರು 22 ಸಾವಿರಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಸಿಕ್ಕಿಂ ಪ್ರವಾಹದಲ್ಲಿ ಸೇನೆಯ ಮದ್ದುಗುಂಡುಗಳು ನದಿ ದಡದಲ್ಲಿ ಸ್ಫೋಟಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ದಿಢೀರ್ ಪ್ರವಾಹದಲ್ಲಿ ಮದ್ದುಗುಂಡುಗಳು ಕೊಚ್ಚಿ ಹೋಗಿವೆ. ಈ ಸ್ಫೋಟದಲ್ಲಿ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.

ಇನ್ನು “ಲಾಚೆನ್ ಹಾಗೂ ಲಾಚುಂಗ್ನಲ್ಲಿ ಸುಮಾರು 3 ಸಾವಿರ ಜನರು ಸಿಲುಕಿಕೊಂಡಿದ್ದಾರೆ. ಅದೇ ಪ್ರದೇಶದಲ್ಲಿ ಮೋಟಾರು ಸೈಕಲ್ನಲ್ಲಿ ಸಾಗುತ್ತಿದ್ದ 3,150 ಮಂದಿ ಕೂಡ ಸಿಲುಕಿಕೊಂಡಿದ್ದಾರೆ. ನಾವು ಎಲ್ಲರನ್ನೂ ಸೇನೆ ಹಾಗೂ ವಾಯು ಪಡೆ ಹೆಲಿಕಾಪ್ಟರ್ ಮೂಲಕ ತೆರವುಗೊಳಿಸುತ್ತಿದ್ದೇವೆ” ಎಂದು ಸಿಕ್ಕಿಂನ ಮುಖ್ಯ ಕಾರ್ಯದರ್ಶಿ ವಿಜಯ್ ಭೂಷಣ್ ಪಾಠಕ್ ತಿಳಿಸಿದ್ದಾರೆ. ಇದರ ಜೊತೆ ಇನ್ನೊಂದು ಹಿಮನದಿ ಸ್ಫೋಟಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯಕ್ಕೆ ತಮ್ಮ ಪ್ರವಾಸವನ್ನು ವಿಳಂಬಿಸುವಂತೆ ಆಡಳಿತ ಪ್ರವಾಸಿಗಳನ್ನು ಆಗ್ರಹಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು