ಮುಂಬೈ:ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆ ಸಿದ್ಧಗೊಂಡಿದೆ. ಈ ಸಮಾರಂಭದಿಂದ ದೇಶದೆಲ್ಲೆಡೆ ಹಬ್ಬದ ವಾತಾವರಣ ಇದೆ.ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ-ವಿದೇಶಗಳ ಗಣ್ಯರು ಬಾಲರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದೀಗ ಸುಮಾರು 33,258 ಮಣ್ಣಿನ ಹಣತೆಗಳನ್ನು ಬೆಳಗಿಸಿ `ಸಿಯಾವರ್ ರಾಮಚಂದ್ರ ಕೀ ಜೈ’ ಎಂದು ಬರೆದಿದ್ದಾರೆ.
ರಾಮಭಕ್ತರ ಈ ವಿಶೇಷ ಸಾಧನೆ ಗಿನ್ನಿಸ್ ದಾಖಲೆ ಸೇರಿದೆ. ಶನಿವಾರ ರಾತ್ರಿ ಇಲ್ಲಿನ ಚಂದಾ ಕ್ಲಬ್ ಮೈದಾನದಲ್ಲಿ ರಾಜ್ಯ ಸಚಿವ ಸುಧೀರ್ ಮುಂಗಂತಿವಾರ್ ಅವರ ಸಮ್ಮುಖದಲ್ಲಿ ರಾಮಭಕ್ತರು ಈ ಕಾರ್ಯಕ್ರಮ ನಡೆಸಿದ್ದಾರೆ.