ಚಂಡಿಗಢ: “ಒಂದು ಬಾರಿ ಬೀದಿ ನಾಯಿ ಕಚ್ಚಿದರೆ ರಾಜ್ಯ ಸರ್ಕಾರ ಸಂತ್ರಸ್ತ ವ್ಯಕ್ತಿಗೆ ಕನಿಷ್ಟ 10,000 ರೂ. ಪರಿಹಾರ” ನೀಡಬೇಕೆಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.
ಬೀದಿ ನಾಯಿ ಅಥವಾ ದನಗಳಂತಹ ಬೀದಿ ಪ್ರಾಣಿಗಳ ದಾಳಿ ಪ್ರಕರಣದ ವೇಳೆ ಪರಿಹಾರ ಪಾವತಿಸುವ ವಿಚಾರದಲ್ಲಿ ಪ್ರಾಥಮಿಕವಾಗಿ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಹೊರಬೇಕು. ಪ್ರತಿ ಹಲ್ಲಿನ ಗುರುತಿಗೆ ಕನಿಷ್ಠ 10,000 ರೂ. ಮತ್ತು 0.2 ಸೆಂ.ಮೀ ಗಾಯಕ್ಕೆ ಕನಿಷ್ಠ 20,000 ರೂ. ಪರಿಹಾರ ಧನ ನೀಡಬೇಕೆಂದು ಹೇಳಿದೆ.
ಬಿಡಾಡಿ ಪ್ರಾಣಿಗಳ ದಾಳಿಗೆ ಸಂಬಂಧಿಸಿದ 193 ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಪ್ರಕಟಿಸಿದೆ. ಈ ರೀತಿಯ ಪ್ರಕರಣಗಳು ದಾಖಲಾದ ನಂತರ ಏಜೆನ್ಸಿ/ ಖಾಸಗಿ ವ್ಯಕ್ತಿಯಿಂದ ರಾಜ್ಯ ಸರ್ಕಾರ ವಸೂಲಿ ಮಾಡಿ ಸಂತ್ರಸ್ತ ವ್ಯಕ್ತಿಗೆ ಪರಿಹಾರವನ್ನು ಪಾವತಿಸಬೇಕೆಂದು ಸೂಚಿಸಿದೆ.