News Karnataka Kannada
Thursday, May 02 2024
ದೇಶ

ಕನಸು ನನಸಾಯಿತು: ನೂತನ ಸಂಸತ್ ಭವನಕ್ಕೆ ಭೇಟಿ ನೀಡಿದ ಸುಧಾ ಮೂರ್ತಿ

ಇನ್ಪೋಸಿಸ್​ ಸಂಸ್ಥಾಪಕಿ,ಲೇಖಕಿ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರು ಇಂದು(ಶುಕ್ರವಾರ) ನವದೆಹಲಿಯ ಹೊಸ ಸಂಸತ್ ಕಟ್ಟಡಕ್ಕೆ ಭೇಟಿ ನೀಡಿದ್ದಾರೆ. ಇದು ತುಂಬಾ ಸುಂದರವಾಗಿದೆ. ವರ್ಣಿಸಲು ಪದಗಳಿಲ್ಲ. ನಾನು ಇದನ್ನು ಬಹಳ ದಿನಗಳಿಂದ ನೋಡಬೇಕೆಂದು ಬಯಸಿದ್ದೆ ಎಂದು ಹೇಳಿದ್ದಾರೆ.
Photo Credit : News Kannada

ದೆಹಲಿ: ಇನ್ಪೋಸಿಸ್​ ಸಂಸ್ಥಾಪಕಿ,ಲೇಖಕಿ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರು ಇಂದು(ಶುಕ್ರವಾರ) ನವದೆಹಲಿಯ ಹೊಸ ಸಂಸತ್ ಕಟ್ಟಡಕ್ಕೆ ಭೇಟಿ ನೀಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾ ಮೂರ್ತಿ ಅವರು ಹೊಸ ಕಟ್ಟಡದ ಬಗ್ಗೆ ತಮ್ಮ ವಿಸ್ಮಯ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. “ಇದು ತುಂಬಾ ಸುಂದರವಾಗಿದೆ. ವರ್ಣಿಸಲು ಪದಗಳಿಲ್ಲ. ನಾನು ಇದನ್ನು ಬಹಳ ದಿನಗಳಿಂದ ನೋಡಬೇಕೆಂದು ಬಯಸಿದ್ದೆ. ಇದು ಇಂದು ಕನಸು ನನಸಾಯಿತು. ಹೊಸದಾಗಿ ನಿರ್ಮಿಸಲಾದ ಸಂಸತ್ ಕಟ್ಟಡ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಅವರು ಇದು ಸುಂದರವಾಗಿದೆ… ಇದು ಕಲೆ, ಸಂಸ್ಕೃತಿ, ಭಾರತೀಯ ಇತಿಹಾಸ – ಎಲ್ಲವೂ ಸುಂದರವಾಗಿದೆ” ಎಂದು ಹೇಳಿದ್ದಾರೆ.

ಕಟ್ಟಡವನ್ನು ನಿರ್ಮಿಸಿದ ಅವಧಿಯು ನಿಜವಾಗಿಯೂ ಗಮನಾರ್ಹವಾದುದು. ಇಷ್ಟು ಕಡಿಮೆ ಅವಧಿಯಲ್ಲಿ, ಅದನ್ನು ಸುಂದರವಾಗಿ ಜೋಡಿಸಲಾಗಿದೆ ಮತ್ತು ಕ್ಯುರೇಟ್ ಮಾಡಲಾಗಿದೆ .ಈ ಎಲ್ಲಾ ವಿಷಯಗಳನ್ನು ನೋಡಲು ನಾನು ಒಂದು ಅಥವಾ ಎರಡು ದಿನಗಳನ್ನು ಕಳೆಯಲು ಬಯಸುತ್ತೇನೆ ಎಂದಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು