ಮೃತನನ್ನು ಎಂ ಧರುಣಶಂಕರ್ ಎಂದು ಗುರುತಿಸಲಾಗಿದೆ. ಈತ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಎಂ ಮುರುಗನ್ ಅವರ ಪುತ್ರನಾಗಿದ್ದು, ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಕ್ವಾರ್ಟಸ್ ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಕೋಚಿಂಗ್ ತರಗತಿಗೆ ಸೀಟ್ ಪಡೆಯಲು ಇತ್ತೀಚಿಗೆ ಖಾಸಗಿ ಸಂಸ್ಥೆ ನಡೆಸಿದ್ದ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಧರುಣ ಶಂಕರ್ ಹಾಜರಾಗಿದ್ದ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವಲ್ಲಿ ವಿಫಲತೆಯಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ, ಪೋಷಕರು ಕೂಡಾ ಆತ ಗಳಿಸಿರುವ ಅಂಕಗಳ ಬಗ್ಗೆ ಪ್ರಶ್ನಿಸಿದ್ದರು ಎನ್ನಲಾಗಿದೆ. ಈ ಮಧ್ಯೆ ಶುಕ್ರವಾರ ರಾತ್ರಿ ಮನೆಯಲ್ಲಿ ಒಬ್ಬನೇ ಇರುವಾಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮುಂದಿನ ತನಿಖೆ ಪ್ರಗತಿಯಲ್ಲಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಎಂಸಿಹೆಚ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಾಯಿಬಾಬಾ ಕಾಲೋನಿ ಪೊಲೀಸರು ಹೇಳಿದ್ದಾರೆ.