ಅಂತರ್ಜಾತಿ ಯುವಕನನ್ನು ಮದುವೆಯಾದ ಮಗಳು: ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

ಚೆನ್ನೈ (ಫೆ. 18) : ಮುದ್ದಿನ ಮಗಳು ಅಂತರ್ಜಾತಿ ಮದುವೆಯಾದಳು  ಎಂಬ ಏಕೈಕ ಕಾರಣಕ್ಕೆ ತಂದೆ ಹೆಂಡತಿ ಮತ್ತಿಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ನಾಗಪಟ್ಟಿನಂನಲ್ಲಿ ನಡೆದಿದೆ. ಪರಿಶಿಷ್ಟ ಜಾತಿ  ಯುವಕನನ್ನು ಮಗಳು ಮದುವೆಯಾಗುವುದಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರೂ ಆದರೂ ಮಗಳು ತನ್ನ ಇಚ್ಛೆಯಂತೆ ಪ್ರೀತಿಸಿದ ಹುಡುಗನ ಮದುವೆಯಾದಳು.

ಮಗಳ ಈ ಕಾರ್ಯದಿಂದ ತಂದೆ ಸಾಕಷ್ಟು ನೊಂದು ಈ ಕೃತ್ಯ ಎಸಗಿದ್ದಾರೆ. ಜೊತೆಗೆ ಉಳಿದ ಇಬ್ಬರು ಹೆಣ್ಣು ಮಕ್ಕಳನ್ನು ಕೂಡ ಹತ್ಯೆ ಮಾಡಿದ್ದಾರೆ. ಅದರಲ್ಲಿ ಒಬ್ಬ ಮಗಳು ಇನ್ನು ಅಪ್ರಾಪ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ಷಣ್​​ ಎಂಬ ತಂದೆ ಸಾವನ್ನಪ್ಪಿದವರು. ಈತ ನಾಗಪಟ್ಟಿನಂನಲ್ಲಿ ಟೀ ಶಾಪ್​ ನಡೆಸುತ್ತಿದ್ದರು. ಇವರ ಮೊದಲ ಮಗಳು ಅಂತರ್ಜಾತಿ ವಿವಾಹ ಆಗಿದ್ದಾಳೆ. ಆಕೆ ಸದ್ಯ ಗಂಡನೊಂದಿಗೆ ಜೀವನ ನಡೆಸುತ್ತಿದ್ದು, ಸರುಕ್ಷಿತವಾಗಿದ್ದಾಳೆ. ಘಟನೆ ಕುರಿತು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಲಾಗಿದೆ ಎಂದು ನಾಗಪಟ್ಟಿನಂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಜಿ ಜವಹರ್​ ತಿಳಿಸಿದ್ದಾರೆ.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago