ಚೆನ್ನೈ : ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ಪ್ರವಾಸ ಕುರಿತು ಸುಳ್ಳು ಹಾಗೂ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ವಿರುದ್ಧ ಡಿಎಂಕೆ ಪಕ್ಷವು ಶನಿವಾರ ನೋಟಿಸ್ ಜಾರಿ ಮಾಡಿದೆ.
ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ನೋಟಿಸ್ ಜಾರಿ ಮಾಡಿದ್ದು, ‘ಅಣ್ಣಾಮಲೈ ಅವರು ತಾವು ನೀಡಿರುವ ಹೇಳಿಕೆಗಳನ್ನು ವಾಪಸ್ ಪಡೆದು 24 ಗಂಟೆಗಳ ಒಳಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಮತ್ತು ಎರಡು ದಿನಗಳೊಳಗಾಗಿ ಮುಖ್ಯಮಂತ್ರಿ ಅವರ ಸಾರ್ವಜನಿಕ ಪರಿಹಾರ ನಿಧಿಗೆ ₹ 100 ಕೋಟಿ ಪಾವತಿಸುವಂತೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು’ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.
‘ದುಬೈ ಎಕ್ಸ್ಪೋ 2020’ರಲ್ಲಿ ಭಾಗವಹಿಸಲು ಮತ್ತು ತಮಿಳುನಾಡಿನಲ್ಲಿ ಹೂಡಿಕೆ ಮಾಡಲು ಗಲ್ಫ್ ರಾಷ್ಟ್ರದ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸುವ ಸಲುವಾಗಿ ಸ್ಟಾಲಿನ್ ಅವರು ಪ್ರಸ್ತುತ ಯುಇಎ ಪ್ರವಾಸದಲ್ಲಿದ್ದಾರೆ.
ಮಾರ್ಚ್ 24 ಮತ್ತು 25ರಂದು ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮಗಳಲ್ಲಿ ಅಣ್ಣಾಮಲೈ ಅವರು, ಸ್ಟಾಲಿನ್ ಅವರ ಯುಎಇ ಭೇಟಿಗೆ ವೈಯಕ್ತಿಕ ಉದ್ದೇಶಗಳು ಕಾರಣವೆಂದು ಆರೋಪ ಮಾಡಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.