News Karnataka Kannada
Monday, May 06 2024
ತಮಿಳುನಾಡು

ಅನಧಿಕೃತವಾಗಿ ಭಾರತದ ಗಡಿ ಪ್ರವೇಶ : ಇಬ್ಬರು ಬಂಧನ

Untitled 157
Photo Credit :

ರಾಮೇಶ್ವರಂ: ಅನಧಿಕೃತವಾಗಿ ಭಾರತದ ಗಡಿ ಪ್ರವೇಶ ಮಾಡಿದ್ದ ಶ್ರೀಲಂಕಾದ ಇಬ್ಬರು ನಾಗರಿಕರನ್ನು ಬಂಧನ ಮಾಡಲಾಗಿದೆ.

ರಾಮೇಶ್ವರಂ ಜಿಲ್ಲೆಯ ದೇವಿಪಟ್ಟಣಂ ಮರೈನ್ ಪೊಲೀಸರು ಶ್ರೀಲಂಕಾದ ನಾಗರಿಕರನ್ನು ಬಂಧಿಸಿದ್ದಾರೆ.

ಬಂಧನಕ್ಕೊಳಗಾದ ಈ ಇಬ್ಬರ ಮೇಲೆ ಶ್ರೀಲಂಕಾದಲ್ಲಿ ಡ್ರಗ್ಸ್ ಸಾಗಾಣೆ ಹಾಗೂ ಮಾರಾಟದ ಆರೋಪ ಇದೆ.

ಶ್ರೀಲಂಕಾದಲ್ಲಿ ಭಾರೀ ಆರ್ಥಿಕ ಬಿಕ್ಕಟ್ಟು ಉದ್ಭವಿಸಿರುವುದರಿಂದ ಅಲ್ಲಿನ ಕೆಲ ನಾಗರಿಕರು ಬೇರೆ ದೇಶಗಳತ್ತ ವಲಸೆ ಹೋಗುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನೊಂದೆಡೆ ಇಂದು ಶ್ರೀಲಂಕಾದಲ್ಲಿ ಅನೇಕ ಕಾರ್ಮಿಕ ಸಂಘಟನೆಗಳು ಹಾಗೂ ಸಾವಿರಾರು ಕಾರ್ಮಿಕರು ಬೀದಿಗಿಳಿದು ಶ್ರೀಲಂಕಾದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂದ್ ಕೂಡ ಆಚರಿಸಿದ್ದಾರೆ. ಪ್ರಧಾನಿ ಮಹಿಂದಾ ರಾಜಪಕ್ಸ ಅವರು ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು