News Karnataka Kannada
Tuesday, April 30 2024
ತಮಿಳುನಾಡು

ಆಂಧ್ರಪ್ರದೇಶದಲ್ಲಿ ಮುಂದುವರೆದ ಮಳೆ…

China Rain
Photo Credit :

ಆಂದ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಯಾಗುತ್ತಿದ್ದು, ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ.  3೦ ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರವಾಹ ಪೀಡಿತರಿಗೆ ತಕ್ಷಣದ ಆರ್ಥಿಕ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ, ಜೊತೆಗೆ ಬೆಳೆ ಹಾನಿಯ ಅಂದಾಜು ರಚಿಸಿ ರೈತರು ತಮ್ಮ ನಷ್ಟವನ್ನು ಚೇತರಿಸಿಕೊಳ್ಳಲು ಸಹಾಯ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಪ್ರವಾಹ ಪೀಡಿತ ಮನೆಗಳಿಂದ ನಾಗರಿಕರಿಗೆ ನೆರವು ಮತ್ತು ಅವರಿಗೆ ಆಶ್ರಯ ನೀಡುವಂತೆ ಮುಖ್ಯಮಂತ್ರಿ ಕರೆ ನೀಡಿದರು.

ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದವರಿಗೆ ಪ್ರತಿ ವ್ಯಕ್ತಿಗೆ 1,000 ರೂ.ಗಳ ವಿಶೇಷ ನೆರವು ಮತ್ತು ಪ್ರತಿ ಕುಟುಂಬಕ್ಕೆ ಗರಿಷ್ಠ 2,000 ರೂ.ಗಳನ್ನು ಘೋಷಿಸಲಾಗಿದೆ. ಈಗಾಗಲೇ ವಿವಿಧ ಪುರಸಭೆಗಳಿಂದ 5೦೦ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬೀದಿಗಳು ಮತ್ತು ಚರಂಡಿಗಳನ್ನು ತೆರವುಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ತಿರುಪತಿಯಲ್ಲಿ ಒಳಚರಂಡಿ ವ್ಯವಸ್ಥೆಗೆ ಯೋಜನೆಯನ್ನು ರೂಪಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು