ತಮಿಳುನಾಡು : ಡಿಎಂಕೆ ಪರಮೋಚ್ಛ ನಾಯಕ ಹಾಗೂ ಮಾಜಿ ಸಿಎಂ ದಿವಂಗತ ಎಂ. ಕರುಣಾನಿಧಿ ಅವರ ಸ್ಮಾರಕ 39 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಇಲ್ಲಿನ ಮರಿನಾದಲ್ಲಿರುವ ಕಾರರಾಜನ್ ಸಲಾಯ್ನಲ್ಲಿ ಸ್ಮಾರಕ ನಿರ್ಮಿಸುವುದಾಗಿ ಸಿಎಂ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಕಡಲ ತೀರದ ಎರಡು ಎಕರೆ 21 ಗುಂಟೆ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಲಿದ್ದು, ಡಿಎಂಕೆ ಸಂಸ್ಥಾಪಕ ಅಣ್ಣಾದೊರೈ ಅವರ ಸ್ಮಾರಕ ಪಕ್ಕದಲ್ಲೇ ಕರುಣಾನಿಧಿ ಅವರ ಸ್ಮಾರಕ ನಿರ್ಮಾಣವಾಗಲಿದೆ.