News Karnataka Kannada
Monday, April 29 2024
ತಮಿಳುನಾಡು

ಕರ್ನಾಟಕದ ಮಾಜಿ ರಾಜ್ಯಪಾಲ ಸಿಎಂ ಕೆ. ರೋಸಯ್ಯ ನಿಧನ

Rosaih
Photo Credit :

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ. ರೋಸಯ್ಯ ನಿಧನರಾಗಿದ್ದಾರೆ. ಅವಿಭಜಿತ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ, ತಮಿಳುನಾಡು ರಾಜ್ಯಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು.

ರೋಸಯ್ಯ ಅವರು ಕರ್ನಾಟಕದ ಹಂಗಾಮಿ ರಾಜ್ಯಪಾಲರಾಗಿ 63 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು. 2014ರಲ್ಲಿ ಗವರ್ನರ್ ಆಗಿ ಸೇವೆ ಅವರು ಸಲ್ಲಿಸಿದ್ದರು.

ಹೈದರಾಬಾದ್ ನ ನಿವಾಸದಲ್ಲಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ರೋಸಯ್ಯ ಅವರು ಕಾಂಗ್ರೆಸ್ ಹಿರಿಯ ನಾಯಕರಾಗಿದ್ದರು. ಹಲವು ಬಾರಿ ಹಣಕಾಸು ಸಚಿವರಾಗಿದ್ದರು. 7 ಬಾರಿ ಬಜೆಟ್ ಮಂಡಿಸಿ ವಿವಾದರಹಿತ ರಾಜಕಾರಣಿಯಾಗಿದ್ದರು. ಮಾಜಿ ಸಿಎಂ ವೈ.ಎಸ್. ರಾಜಶೇಖರ್ ರೆಡ್ಡಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ನಂತರ ಅವರನ್ನು ಸಿಎಂ ಮಾಡಲಾಗಿತ್ತು.

ಮಾರ್ಗಮಧ್ಯೆ ಆಸ್ಪತ್ರೆಗೆ ಕರೆದೊಯ್ಯುವಾಗ ಬಿಪಿ ಕಡಿಮೆಯಾಗಿ ರೋಸಯ್ಯ ಮೃತಪಟ್ಟಿದ್ದಾರೆ. ಅವರ ಕುಟುಂಬದವರು ಯಾರೂ ರಾಜಕೀಯದಲ್ಲಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು