News Karnataka Kannada
Sunday, April 28 2024
ತಮಿಳುನಾಡು

ಕಲ್ಲು ಕ್ವಾರಿಯಲ್ಲಿ ಸಿಲುಕಿದ್ದ ಆರು ಮಂದಿ ಕಾರ್ಮಿಕರು : ಇಬ್ಬರ ರಕ್ಷಣೆ

Untitled 1
Photo Credit :

ತಮಿಳುನಾಡು : ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಮುನ್ನೀರಪಳ್ಳಂ ಬಳಿಯ ಅಡೈಮಿತಿಪ್ಪಂಕುಳಂನಲ್ಲಿ 250 ಅಡಿ ಆಳದ ಕಲ್ಲು ಕ್ವಾರಿಯೊಂದರಲ್ಲಿ ಶನಿವಾರ ರಾತ್ರಿ ದೈತ್ಯ ಬಂಡೆಯೊಂದು ಉರುಳಿ ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಅದರಲ್ಲಿ ಸಿಲುಕಿಕೊಂಡಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯು ತಡರಾತ್ರಿ 11.30 ರ ಸುಮಾರಿಗೆ ನಡೆದಿದೆ. ಕ್ವಾರಿಯಲ್ಲಿ ಸಿಲುಕಿದ ಕಾರ್ಮಿಕರನ್ನು ಲಾರಿ ಚಾಲಕರಾದ ನತ್ತರ್ಕುಲಂನ ವಿಜಯ್ ಮತ್ತು ವಿಟ್ಟಿಲಪುರಂನ ಮುರುಗನ್ ಎಂಬ ಇಬ್ಬರು ಕಾರ್ಮಿಕರನ್ನು ರಕ್ಷಿಸಿದ್ದಾರೆ. ಇತರ ನಾಲ್ವರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಆಸ್ರಾ ಗಾರ್ಗ್ ತಿಳಿಸಿದ್ದಾರೆ.

ಹೆವಿ-ಡ್ಯೂಟಿ ಕ್ರೇನ್‌ಗಳು ಮತ್ತು ರಾಕ್ ಕ್ಲೈಂಬಿಂಗ್ ಪರಿಣಿತರು ಸಹ ಪೊಲೀಸ್ ಮತ್ತು ಅಗ್ನಿಶಾಮಕ ಸೇವಾ ಸಿಬ್ಬಂದಿ ನೇತೃತ್ವದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಇಂದು ಬೆಳಗ್ಗೆ ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್ ಕೂಡ ತರಲಾಗಿದ್ದು, ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಬಂಡೆಯನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು