ಕೊರೊನಾ ಭೀತಿ: ವಿಷ ಸೇವಿಸಿದ ಕುಟುಂಬ, ತಾಯಿ-ಮಗು ಸಾವು

ಮಧುರೈ, ಜ. 10 : ಕೊರೊನಾ ಸೋಂಕು ತಗುಲಿದೆ ಎಂಬ ಭೀತಿಯಲ್ಲಿ ವಿಷ ಸೇವಿಸಿದ ಪರಿಣಾಮ ತಾಯಿ ಹಾಗೂ 3 ವರ್ಷದ ಮಗು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಜ್ಯೋತಿಕಾ (29) ಎಂದು ಗುರುತಿಸಲಾಗಿದ್ದು, ವಿಷ ಸೇವಿಸಿದ ಅಸ್ವಸ್ಥರಾಗಿರುವ ಕುಟುಂಬದ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

ಜ್ಯೋತಿಕಾಳ ತಾಯಿ ಲಕ್ಷ್ಮಿಯ ಪತಿ ನಾಗರಾಜ್ ಎಂಬುವವರು ಇತ್ತೀಚೆಗೆ ಸಹಜ ಕಾಯಿಲೆಯಿಂದಾಗಿ ಕಳೆದ ಡಿಸೆಂಬರ್‍ನಲ್ಲಿ ಮೃತಪಟ್ಟಿದ್ದರು, ಆಗಿನಿಂದಲೂ ಕುಟುಂಬದ ನಿರ್ವಹಣೆ ತುಂಬಾ ಕಷ್ಟವಾಗಿತ್ತು, ಈ ನಡುವೆ ಮಗಳು ಜ್ಯೋತಿಕಾಳ ತನ್ನ ಗಂಡನನ್ನು ಬಿಟ್ಟು ತಾಯಿಯ ಮನೆಯಲ್ಲೇ ವಾಸಿಸುತ್ತಿದ್ದರು.

ಜನವರಿ 8 ರಂದು ಜ್ಯೋತಿಕಾಗೆ ಕೊರೊನಾ ಸೋಂಕು ತಗುಲಿದ್ದು ಕೊರೊನಾ ಇಡೀ ಕುಟುಂಬಕ್ಕೆ ಅಂಟಿದೆ ಎಂಬ ಭೀತಿಯಲ್ಲಿ ಇಡೀ ಕುಟುಂಬವೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸುದ್ದಿ ತಿಳಿದ ನೆರೆಹೊರೆಯವರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಜ್ಯೋತಿಕಾ, ಲಕ್ಷ್ಮೀ, ಆಕೆಯ ಇಬ್ಬರು ಗಂಡು ಮಕ್ಕಳು, ಜ್ಯೋತಿಕಾಳ ಮೂರು ವರ್ಷದ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಿಸದೆ ಜ್ಯೋತಿಕಾ ಹಾಗೂ ಮಗು ಸಾವನ್ನಪ್ಪಿದ್ದು, ಲಕ್ಷ್ಮೀ ಹಾಗೂ ಅವರ ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago