News Karnataka Kannada
Sunday, May 05 2024
ತಮಿಳುನಾಡು

ಖಾಸಗಿ ಚಿತ್ರ ತೆಗೆದು ಬ್ಲಾಕ್ ಮೇಲ್, ವ್ಯಕ್ತಿಯನ್ನು ಹತ್ಯೆ ಮಾಡಿಸಿದ ವಿದ್ಯಾರ್ಥಿನಿಯರು

Accident Sharadhacar Bng Main 08072021
Photo Credit :

ಚೆನ್ನೈ: ಬಾಲಕಿಯರ ಖಾಸಗಿ ಚಿತ್ರಗಳನ್ನು ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ.ಇ ಬ್ಬರ ಖಾಸಗಿ ಫೋಟೋಗಳನ್ನು ತೆಗೆದು, ಮೊಬೈಲ್ ನಲ್ಲಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಅಲ್ಲದೇ, ಇಬ್ಬರಿಗೂ 50 ಸಾವಿರ ರೂಪಾಯಿ ನೀಡುವಂತೆ ಕೇಳಿದ್ದಾನೆ.ಸದ್ಯ ಬಂಧಿತರಾಗಿರುವ ಇಬ್ಬರು ಬಾಲಕಿಯರೊಂದಿಗೆ ಸತ್ತ ವ್ಯಕ್ತಿ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಹಣ ಕೊಡಲು ವಿಫಲವಾದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದಾನೆ ಎಂದು ಬಂಧಿತ ಬಾಲಕಿಯರು ಪೊಲೀಸರ ಮುಂದೆ ಹೇಳಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಪ್ರೇಮ್ ಕುಮಾರ್ ಎಂದು ಗುರುತಿಸಲಾಗಿದೆ.

ಆತನ ಕಿರುಕುಳು ಹೆಚ್ಚಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಅಶೋಕ್ ನ ಬಳಿ ಬಾಲಕಿಯರು ಸಹಾಯ ಕೋರಿದ್ದಾರೆ. ಇದಕ್ಕೆ ಸ್ಪಂದಿಸಿದ್ದ ಅಶೋಕ್, ಅವರಿಗೆ ಸಲಹೆ ನೀಡಿದ್ದಾನೆ.

ಆತನ ಸಲಹೆಯಂತೆ ಬಾಲಕಿಯರು ಪ್ರೇಮ್ ಕುಮಾರ್ ಗೆ ಹತ್ತಿರದ ಶೋಲವರಮ್ ಟೋಲ್ ಪ್ಲಾಜಾ ಹತ್ತಿರ ಬರುವಂತೆ ಹೇಳಿದ್ದಾರೆ. ಅಲ್ಲಿಗೆ ಪ್ರೇಮ್ ಕುಮಾರ್ ಬರುತ್ತಿದ್ದಂತೆ ಅಶೋಕ್ ಹಾಗೂ ಆತನ ಸ್ನೇಹಿತರು ಆತನನ್ನು ಅಪಹರಿಸಿ, ಈಚಂಗಾಡು ಗ್ರಾಮಕ್ಕೆ ಕರೆದುಕೊಂಡು ಹೋಗಿ, ಆತನನ್ನು ಹತ್ಯೆ ಮಾಡಿ, ಅಲ್ಲೇ ಸಮಾಧಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು