ಚೆನ್ನೈನಲ್ಲಿ ನಿನ್ನೆ ರಾತ್ರಿಯೂ ಧಾರಾಕಾರ ಮಳೆ ಸುರಿದಿದ್ದು, ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನ ನೀರು ಹೊರಹಾಕಲಾರದೆ ಪರದಾಡುತ್ತಿದ್ದಾರೆ. ಚೆನ್ನೈನ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ವ್ಯವಸ್ಥೆ ಇಲ್ಲದಂತಾಗಿದೆ.
ನಿನ್ನೆ ಒಂದೇ ದಿನದಲ್ಲಿ 502 ರಸ್ತೆಗಳು ಜಲಾವೃತಗೊಂಡಿದ್ದು, ಸ್ಥಳೀಯ ಆಡಳಿತ ತೆರೆದಿರುವ ಸಹಾಯವಾಣಿಗೆ 3 ಸಾವಿರ ದೂರುಗಳು ಬಂದಿವೆ.
ಅಶೋಕ್ ನಗರ, ಟಿ ನಗರ ರಸ್ತೆಗಳಲ್ಲಿ ನೀರು ತುಂಬಿದ್ದು, ಈ ಭಾಗಗಳಲ್ಲಿ ವಾಸಿಸುವ ಜನರಿಗೆ ಮನೆಯ ಬಾಗಿಲು ತೆರೆಯುವುದೂ ಅಸಾಧ್ಯವಾಗಿದೆ.
ಇಂದು ಮಳೆ ಮುಂದುವರಿದರೆ ಪರಿಸ್ಥಿತಿ ಬಿಗಡಾಯಿಸಲಿದೆ. ಆದರೆ ಕಡಿಮೆ ಪ್ರಮಾಣದ ಮಳೆಯಾದರೆ ರಸ್ತೆಗಳಲ್ಲಿ ನೀರಿನ ಮಟ್ಟ ಕಡಿಮೆ ಆಗಲಿದೆ. ಇನ್ನು ನೀರನ್ನು ಪಂಪ್ ಮಾಡಿ ನದಿಗಳಿಗೆ ಬಿಡಲಾಗುತ್ತಿದೆ. ಆದರೆ ಹೆಚ್ಚು ಮಳೆ ಕಾರಣ ಪಂಪ್ ಪ್ರಕ್ರಿಯೆ ನಿಧಾನವಾಗುತ್ತಿದೆ.