News Karnataka Kannada
Monday, May 06 2024
ತಮಿಳುನಾಡು

ಚೆನ್ನೈ ನಲ್ಲಿ ಭಾರಿ ಮಳೆ: ರಕ್ಷಣೆ, ಪರಿಹಾರ ಕಾರ್ಯಾಚರಣೆಗಳಿಗೆ ಕೇಂದ್ರದಿಂದ ಅಗತ್ಯ ನೆರವು ಘೋಷಿಸಿದ ಪ್ರಧಾನಿ ಮೋದಿ

Heavy rains disrupt normal life in Hubballi
Photo Credit :

ಚೆನ್ನೈ: ಹಲವು ವರ್ಷಗಳ ಬಳಿಕ ಸುರಿದ ಭಾರಿ ಮಳೆಯ ಪರಿಣಾಮ ತಮಿಳುನಾಡು ರಾಜ್ಯದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.

24 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಿದ್ದು, ಮೂರು ನಗರಗಳ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.ಈಶಾನ್ಯ ಮುಂಗಾರು ಪ್ರಾರಂಭವಾದಾಗಿನಿಂದಲೂ, ಅಕ್ಟೋಬರ್ ತಿಂಗಳಲ್ಲಿ ತಮಿಳುನಾಡು, ಪುದುಚೆರಿಗಳ ಭಾಗದಲ್ಲಿ ಎಂದಿಗಿಂತಲೂ ಶೇ.43 ರಷ್ಟು ಹೆಚ್ಚು ಮಳೆಯಾಗಿದೆ.

6 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಈ ಪ್ರಮಾಣದಲ್ಲಿ ಮಳೆಯಾಗಿದೆ. ಹಲವೆಡೆ ನಗರಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ತಮಿಳುನಾಡಿಗೆ ಪರಿಸ್ಥಿತಿ ನಿಭಾಯಿಸುವುದಕ್ಕಾಗಿ ಅಗತ್ಯ ಸಹಕಾರ ನೀಡುವುದಾಗಿ ಭರವಸೆ

“ತಮಿಳುನಾಡು ಸಿಎಂ ಎಂ ಕೆ ಸ್ಟ್ಯಾಲಿನ್ ಅವರೊಂದಿಗೆ ಮಾತನಾಡಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಉಂಟಾಗಿರುವ ಪರಿಣಾಮಗಳ ಬಗ್ಗೆ ಚರ್ಚಿಸಲಾಯಿತು. ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಹಾರ ಕಾರ್ಯಗಳಲ್ಲಿ ಕೇಂದ್ರದಿಂದ ತಮಿಳುನಾಡಿಗೆ ಅಗತ್ಯ ಭರವಸೆ ನೀಡಲಾಗುವುದು” ಎಂದು ಮೋದಿ ಭರವಸೆ ನೀಡಿದ್ದಾರೆ.

ಇದೇ ವೇಳೆ ತಮಿಳುನಾಡು ಸಿಎಂ ಜಲಾವೃತಗೊಂಡಿರುವ ಪ್ರದೇಶಗಳನ್ನು ಹಿರಿಯ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿ, ನೀರನ್ನು ಹೊರಹಾಕುವುದಕ್ಕೆ ಕ್ಷಿಪ್ರಗತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು