News Karnataka Kannada
Friday, May 03 2024
ತಮಿಳುನಾಡು

ಚೆನ್ನೈ: ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

Petrol Bomb
Photo Credit :

ಚೆನ್ನೈ : ಗುರುವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ದುಷ್ಕರ್ಮಿಗಳು ದ್ವಿಚಕ್ರ ವಾಹನಗಳಲ್ಲಿ ಬಂದು ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ದುಷ್ಕರ್ಮಿಗಳು ಪೊಲೀಸರ ದಾರಿ ತಪ್ಪಿಸಿ ಪರಾರಿಯಾಗಿದ್ದಾರೆ.

ಆದರೆ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಚೆನ್ನೈನ ನಂದನಂನಿಂದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿನೋತ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

‘ನಮ್ಮ ಕಚೇರಿಯ ಮೇಲೆ ನಸುಕಿನ 1:30 ರ ಸುಮಾರಿಗೆ ಪೆಟ್ರೋಲ್ ಬಾಂಬ್ ಎಸೆಯಲಾಯಿತು. 15 ವರ್ಷಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು ಅದರಲ್ಲಿ ಡಿಎಂಕೆ ಪಾತ್ರವಿದೆ. ಈ ಘಟನೆಗೆ ತಮಿಳುನಾಡು ಸರ್ಕಾರದ ನಡೆಯನ್ನು ನಾವು ಖಂಡಿಸುತ್ತೇವೆ. ನಾವು ಪೊಲೀಸರಿಗೂ ಮಾಹಿತಿ ನೀಡಿದ್ದೇವೆ, ಬಿಜೆಪಿ ಕಾರ್ಯಕರ್ತರು ಇಂತಹ ವಿಷಯಗಳಿಗೆ ಹೆದರುವುದಿಲ್ಲ” ಎಂದು ಘಟನೆ ಕುರಿತು ಬಿಜೆಪಿ ಸದಸ್ಯ ಕರಾಟೆ ತ್ಯಾಗರಾಜನ್ ಹೇಳಿಕೆ ನೀಡಿದ್ದಾರೆ.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಚೇರಿ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು