ತಮಿಳುನಾಡು : ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಂಜೆ 6ರವರೆಗೂ ವಿಮಾನಗಳ ಆಗಮನವನ್ನು ರದ್ದು ಮಾಡಲಾಗಿದೆ. ಭಾರೀ ಮಳೆ ಹಾಗೂ ಗಾಳಿಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವು ಮಧ್ಯಾಹ್ನ 1.15 ರಿಂದ ಸಂಜೆ 6 ರವರೆಗೆ ಆಗಮಿಸುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದ್ದು, ನಿರ್ಗಮನವು ನಿಗದಿತವಾಗಿ ಮುಂದುವರಿಯುತ್ತದೆ ಎಂದು ವಿಮಾನ ನಿಲ್ದಾಣವು ಇಂದು ಮಧ್ಯಾಹ್ನ ಟ್ವೀಟ್ ಮಾಡಿದೆ.
ಅಂತೆಯೇ ‘ಪ್ರಯಾಣಿಕರ ಸುರಕ್ಷತೆಯ ಅಂಶ ಹಾಗೂ ಗಾಳಿಯ ತೀವ್ರತೆಯನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಡಾ.ಕುಮಾರ್ ತಿಳಿಸಿದ್ದಾರೆ. ಈಗಾಗಲೇ ಚೆನ್ನೈನಲ್ಲಿ ಇಳಿಯಬೇಕಿದ್ದ ವಿಮಾನಗಳನ್ನು ಬೇರೆ ನಿಲ್ದಾಣಗಳಿಗೆ ರವಾನಿಸಲಾಗಿದ್ದು, ಕೇವಲ ನಿಲ್ದಾಣಕ್ಕೆ ಆಗಮಿಸುವ ವಿಮಾನಗಳನ್ನು ರದ್ದು ಮಾಡಲಾಗಿದೆ