ತಮಿಳುನಾಡು: ತಮಿಳುನಾಡಿನಲ್ಲಿ ಸತತವಾಗಿ ಭಾರೀ ಮಳೆಯಾಗುತ್ತಿದ್ದು, 8 ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ 8 ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.
ರಾಜಧಾನಿ ಚೆನ್ನೈ ಅಲ್ಲದೇ ಚೆಂಗಲ್ ಪೇಟ್, ತಿರುವಳ್ಳವರ್, ಕಾಂಚಿಪುರಂ ಮತ್ತು ವಿಲ್ಲುಪುರಂಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇನ್ನು ಹಲವು ದಿನಗಳ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೆರಡು ದಿನ ಇದೇ ರೀತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.