ತಮಿಳುನಾಡು: ತಮಿಳುನಾಡು ಮಾಜಿ ಸಿಎಂ ಒ. ಪನ್ನೀರ್ ಸೆಲ್ವಂ ಅವರ ಪತ್ನಿ ವಿಜಯಲಕ್ಷ್ಮಿ(66) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದರೆ.
ಅನಾರೋಗ್ಯದ ನಿಮಿತ್ತ ವಿಜಯಲಕ್ಷ್ಮಿಅವರನ್ನು ಕೆಲವು ದಿನಗಳ ಹಿಂದೆ ಚೆನ್ನೈ ನ ಜಿಇಎಂ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಇದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಬೇಕಿತ್ತು. ಆದರೆ ಬೆಳಗ್ಗೆ ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಚಿಕಿತ್ಸೆಗೆ ಸ್ಪಂದಿಸದೇ ಅವರು ಬುಧವಾರ ಮುಂಜಾನೆ ಕೊನೆ ಉಸಿರೆಳೆದಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಜಲಸಂಪನ್ಮೂಲ ಸಚಿವ ದೊರೈಮುರಗನ್ ಸೇರಿದಂತೆ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಪನ್ನೀರ್ಸೆಲ್ವಂ ಅವರಿಗೆ ಸಾಂತ್ವನ ಹೇಳಿದ್ದಾರೆ.