ತಮಿಳುನಾಡು : ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆ ಸಾರ್ವಜನಿಕ ಗಣೇಶೋತ್ಸವ ನಿಷೇಧಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ.
ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್ ಹಾಕಲಾಗಿದೆ. ಗಣೇಶ ಮೂರ್ತಿ ತಯಾರಕರಿಗೆ 10 ಸಾವಿರ ರೂ. ಪರಿಹಾರ ನೀಡುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ.
ಸೆ.10ರಂದು ದೇಶಾದ್ಯಂತ ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ತಮಿಳುನಾಡು ಸರ್ಕಾರ ಈ ಹಿನ್ನೆಲೆ ಕೆಲವು ನಿರ್ಬಂಧಗಳನ್ನು ಹೇರಿದೆ. ಅದರ ಪ್ರಕಾರ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿಗಳನ್ನು ಪೂಜಿಸುವಂತಿಲ್ಲ, ಗಣೇಶ ವಿಗ್ರಹಗಳನ್ನು ಮೆರವಣಿಗೆ ಮಾಡಿ ವಿಸರ್ಜಿಸಬಾರದು ಮತ್ತು ಮನೆಗಳಲ್ಲಿ ಮಾತ್ರ ಸರಳವಾಗಿ ಗಣೇಶ ಚತುರ್ಥಿ ಆಚರಿಸಬೇಕು ಎಂದು ಸರ್ಕಾರ ಆದೇಶಿಸಿದೆ.