ತಮಿಳುನಾಡು: 16 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಚೆನ್ನೈ: ತಮಿಳುನಾಡು ಹಾಗೂ ನೆರೆಯ ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ.ನಾಡಿನ 16 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಚೆನ್ನೈ, ಕಡಲೂರು, ಕಂಚೀಪುರ, ಚೆಂಗಲ್‌ಪಟ್ಟು, ವಿಲ್ಲುಪುರ, ತಿರುವಳ್ಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ತಿರುಪ್ಪುರದಲ್ಲಿ ಗುರುವಾರ ಗರಿಷ್ಠ ಮಳೆಯಾಗಿದ್ದು, 20 ಸೆ.ಮೀ. ಮಳೆ ದಾಖಲಾಗಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶುಕ್ರವಾರ ವಿಪರೀತ ವರ್ಷಧಾರೆಯಾಗುವ ಸಾಧ್ಯತೆಯಿರುವುದರಿಂದ ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ(ಎನ್‌ಡಿಆರ್‌ಎಫ್)ಯ ತಂಡಗಳು ಸನ್ನದ್ಧವಾಗಿವೆ. ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಬೆಳಗ್ಗೆ ತಮಿಳುನಾಡು ಹಾಗೂ ಆಂಧ್ರ ಕರಾವಳಿಯನ್ನು ದಾಟಲಿದೆ. ಹೀಗಾಗಿ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಗುರುವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಡಿಪಕ್ಕಂನ ರಾಮನಗರದ ನಿವಾಸಿಗಳು ತಮ್ಮ ವಾಹನಗಳಿಗೆ ಹಾನಿಯಾಗದಿರಲೆಂದು ಅವುಗಳನ್ನು ಸಮೀಪದ ಫ್ಲೈಓವರ್‌ ಮೇಲೆ ನಿಲ್ಲಿಸಿದ್ದಾರೆ. ಕಳೆದ ವಾರದ ಮಳೆಯಲ್ಲಿ ರಾಮನಗರ ಸಂಪೂರ್ಣ ಜಲಾವೃತವಾಗಿ, ಹಾನಿ ಉಂಟಾಗಿತ್ತು.

ಮುಂದಿನ 2 ದಿನಗಳಿಗೆ ಬೇಕಾಗುವಷ್ಟು ಅಗತ್ಯ ಸಾಮಗ್ರಿಗಳನ್ನು ದಾಸ್ತಾನು ಇಡುವಂತೆ ಚೆನ್ನೈ ನಾಗರಿಕರಿಗೆ ನಗರ ಪಾಲಿಕೆಯು ಸೂಚಿಸಿದೆ. ಅನಗತ್ಯವಾಗಿ ಮನೆಗಳಿಂದ ಹೊರಬರದಂತೆಯೂ ಸಲಹೆ ನೀಡಿದೆ.

ಪುದುಚೇರಿಯಲ್ಲೂ ಮಳೆಯ ಆತಂಕ :ವಾಯುಭಾರ ಕುಸಿತದ ಎಫೆಕ್ಟ್ ಎಂಬಂತೆ ಪುದುಚೇರಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನ.21ರ ವರೆಗೂ ಭಾರೀ ಮಳೆ ಖಚಿತ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಶಾಲೆ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago