ತಮಿಳು ನಟ ಸಿಲಂಬರಸನ್ ಕಾರು ಹರಿದು ವೃದ್ಧ ಸಾವು, ಚಾಲಕನ ಬಂಧನ

ಚೆನ್ನೈ: ತಮಿಳು ನಟ ಸಿಲಂಬರಸನ್ ( ಸಿಂಬು) ಅವರ ಇನ್ನೋವಾ ಕಾರು ಢಿಕ್ಕಿ ಹೊಡೆದು ದಾರಿಹೋಕ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ಮಾಧ್ಯಮಗಳ ವರದಿಯ ಪ್ರಕಾರ, ಮಾರ್ಚ್ 18 ರಂದು ಆಸ್ಪತ್ರೆಗೆ ಇನ್ನೋವಾದಲ್ಲಿ ಸಿಂಬು ಅವರ ತಂದೆ ಟಿ. ರಾಜೇಂದ್ರ ಅವರು ತಮ್ಮ ಮೊಮ್ಮಗಳೊಂದಿಗೆ  ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ.

ಘಟನೆ ನಡೆದ ವೇಳೆ ಕಾರನ್ನು ಅವರ ಚಾಲಕ ಸೆಲ್ವಂ ಚಲಾಯಿಸುತ್ತಿದ್ದರು ರಾತ್ರಿ 7 ಗಂಟೆ ವೇಳೆ ಎಲಂಗೋ ಸಲೈ-ಪೋಸ್ ರಸ್ತೆಯ ತಿರುವಿನಲ್ಲಿ ರಸ್ತೆ ದಾಟುತ್ತಿದ್ದ 70 ವರ್ಷದ ಮುನುಸ್ವಾಮಿ ಎಂಬ ದಾರಿಹೋಕರಿಗೆ ಕಾರು ಢಿಕ್ಕಿ ಹೊಡೆದು ಅವರು ಸಾವನ್ನಪ್ಪಿದ್ದಾರೆ. ಘಟನೆ ತಡವಾಗಿ ಸುದ್ದಿಯಾಗುತ್ತಿದೆ.

ಮೃತ ಮುನುಸ್ವಾಮಿ ಅಂಗವಿಕಲರಾಗಿದ್ದು, ರಸ್ತೆಯಲ್ಲಿ ತೆವಳುತ್ತಾ ಸಾಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ. ಗಂಭೀರವಾಗಿ ಗಾಯಗೊಂಡ ವರನ್ನು ರಾಜೇಂದ್ರ ಅವರು ಕಾರಿನಿಂದ ಕೆಳಗಿಳಿದು ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತನ್ನ ಚಾಲಕನನ್ನು ಹೇಳಿದ್ದಾರೆ. ಸಿಂಬು ಅವರಿಗಾಗಿ ಮತ್ತೊಂದು ಕಾರನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಮರುದಿನ ಚಾಲಕನನ್ನು ಬಂಧಿಸಲಾಗಿದೆ.

ಘಟನೆಯ ಕುರಿತು ಸುಳ್ಳು ಮಾಹಿತಿಗಳನ್ನು ಹಬ್ಬಲಾಗುತ್ತಿದೆ. ಅವಘಡ ನಡೆದ ವೇಳೆ ಸಿಂಬು ಅವರು ಕಾರಿನಲ್ಲಿರಲಿಲ್ಲ, ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಅವರ ಕಚೇರಿ ಹೇಳಿದೆ.

Swathi MG

Recent Posts

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

6 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

27 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

45 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

2 hours ago