ಬಟ್ಟೆ ತೊಳೆಯಲು ಹೋಗಿದ್ದ ಐವರು ದೇವಸ್ಥಾನದ ಕೆರೆಯಲ್ಲಿ ಮುಳುಗಿ ಸಾವು

ತಿರುವಳ್ಳುರ್, : ಬಟ್ಟೆ ತೊಳೆಯಲು ಬಂದು ದೇವಸ್ಥಾನದ ಕಲ್ಯಾಣಿಯಲ್ಲಿ ಮುಳುಗಿ ಮೂವರು ಬಾಲಕಿಯರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳುರ್‌ನಲ್ಲಿ ನಡೆದಿದೆ.
ತಿರುವಳ್ಳುರ್​ನ ನ್ಯೂ ಗುಮ್ಮಿಡಿಪೂಂದಿಯ ಸೀತಾಮ್ಮಾಳ್ ರಸ್ತೆಯಲ್ಲಿರುವ ದೇವಾಲಯದ ಬಳಿ ಈ ಘಟನೆ ನಡೆದಿದೆ. ಜೀವಿತಾ (14), ನರ್ಮದಾ (11) ಹಾಗೂ ಅಶ್ವಿತಾ(15) ಎಂಬ ಬಾಲಕಿಯರು ಸಾವನ್ನಪ್ಪಿದರೆ , ಜ್ಯೋತಿಲಕ್ಷ್ಮಿ(30) ಮತ್ತು ಸುಮತಿ (35) ಎಂಬ ಮಹಿಳೆಯರೂ ಮೃತಪಟ್ಟಿದ್ದಾರೆ.ದೇವಸ್ಥಾನದ ಕಲ್ಯಾಣಿಯಲ್ಲಿ ಅವಘಡಇವರೆಲ್ಲಾ ಬಟ್ಟೆ ತೊಳೆಯಲು ತೆರಳಿದ್ದರು. ಆಟವಾಡುತ್ತಾ ಮೂವರೂ ಬಾಲಕಿಯರು ಕಲ್ಯಾಣಿಯಲ್ಲಿ ಮುಳುಗಿದ್ದಾರೆ. ಇದನ್ನು ನೋಡಿದ ಸುಮತಿ ಮತ್ತು ಜ್ಯೋತಿ ಲಕ್ಷ್ಮಿ ಅವರನ್ನೆಲ್ಲ ರಕ್ಷಿಸಲು ತೆರಳಿದ್ದರು. ಅವರೂ ಕೂಡ ಕಲ್ಯಾಣಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಪಾಕ್‌ ಬಸ್ ಸ್ಫೋಟದಲ್ಲಿ 9 ಚೀನಿ ಪ್ರಜೆಗಳು ಸೇರಿ 13 ಸಾವು: ‘ಭಯೋತ್ಪಾದಕ ದಾಳಿ’ ಎಂದ ಚೀನಾಸ್ಥಳೀಯರು ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಎಲ್ಲರ ಮೃತದೇಹಗಳನ್ನು ಕಲ್ಯಾಣಿಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಪೊನ್ನೇರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Indresh KC

Recent Posts

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕತ್ತೆ ಕಿರುಬ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಕತ್ತೆ ಕಿರುಬ ( ಹೈನಾ ) ಶ್ವಾನ ಕಾಣಿಸಿಕೊಂಡಿದೆ.

5 mins ago

ಲೋಕಸಭಾ ಚುನಾವಣೆ : ಮತದಾರನಿಗೆ ಕಾಂಗ್ರೆಸ್​ ಶಾಸಕನಿಂದ ಕಪಾಳಮೋಕ್ಷ

ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ವೈಎಸ್​ಆರ್​ ಕಾಂಗ್ರೆಸ್​ನ ಶಾಸಕ ಎ ಶಿವಕುಮಾರ್ಮ ಮತಗಟ್ಟೆಯಲ್ಲಿ ಮತದಾರರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ…

12 mins ago

ಧರ್ಮ ಪಾಲನೆಯ ಅಸಡ್ಡೆಯೇ ಸಂಘರ್ಷಕ್ಕೆ ಕಾರಣ: ಪಿ.ಎ. ಹನೀಫ್

ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…

24 mins ago

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಚಿತ್ರದ ಶೀರ್ಷಿಕೆ ಅನಾವರಣ

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ

27 mins ago

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

46 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

1 hour ago