News Karnataka Kannada
Sunday, April 28 2024
ತಮಿಳುನಾಡು

ಮಧುರೈ ನ ಆವನಿಯಪುರಂ ಪ್ರದೇಶದಲ್ಲಿ ನಡೆದ ಜಲ್ಲಿಕಟ್ಟು ಕ್ರೀಡೆಯಲ್ಲಿ ಓರ್ವ ವ್ಯಕ್ತಿ ಮೃತ

Jallikattu
Photo Credit :

ಪೊಂಗಲ್ ಆಚರಣೆ ಪ್ರಯುಕ್ತ ತಮಿಳುನಾಡಿನ ಮಧುರೈ ನ ಆವನಿಯಪುರಂ ಪ್ರದೇಶದಲ್ಲಿ ನಡೆದ ಜಲ್ಲಿಕಟ್ಟು ಕ್ರೀಡೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಜಲ್ಲಿ ಕಟ್ಟು ಕ್ರೀಡೆಯಲ್ಲಿ 80 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 38 ಮಂದಿ ಗೂಳಿ ಪಳಗಿಸುವವರು, 24 ಗೂಳಿ ಮಾಲಿಕರು ಹಾಗೂ 18 ಪ್ರೇಕ್ಷಕರು ಸೇರಿದ್ದಾರೆ.

ಕೊಬ್ಬಿದ ಗೂಳಿಗಳನ್ನು ಪಳಗಿಸುವ ಪ್ರಯತ್ನದಲ್ಲಿ ಅನೇಕರು ವಿಫಲಗೊಂಡಿದ್ದು, ಗೂಳಿಗಳು ಅವರನ್ನು ಹಿಮೆಟ್ಟಿಸುತ್ತಾ ಮುಂದಕ್ಕೆ ಓಡಿದವು. ಈ ಸ್ಪರ್ಧೆಯಲ್ಲಿ 80 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.

ಜಲ್ಲಿಕಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಮಾರು 5 ಸಾವಿರಕ್ಕೂ ಹೆಚ್ಚು ಜನ ನೋಂದಾಯಿಸಿಕೊಂಡಿದ್ದರು. ಕೋವಿಡ್ ಕಾರಣದಿಂದ ಈ ಬಾರಿ ಅತಿಥಿಗಳು ಪಾಲ್ಗೊಂಡಿರಲಿಲ್ಲ. ತಮಿಳುನಾಡಿನಲ್ಲಿ ಗೂಳಿ ಕಾಳಗ ಕೇವಲ ಕ್ರೀಡೆ ಮಾತ್ರವಾಗದೆ ಸಂಕ್ರಾಂತಿಯ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆ ಆಗಿದೆ. ಈ ಕ್ರೀಡೆಯ ಆಯೋಜಕರು ಚಿನ್ನ, ಬೆಳ್ಳಿ, ಕಾರುಗಳನ್ನು ಬಹುಮಾನವಾಗಿ ಘೋಷಿಸುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು