ಮಧುರೈ ನ ಆವನಿಯಪುರಂ ಪ್ರದೇಶದಲ್ಲಿ ನಡೆದ ಜಲ್ಲಿಕಟ್ಟು ಕ್ರೀಡೆಯಲ್ಲಿ ಓರ್ವ ವ್ಯಕ್ತಿ ಮೃತ

ಪೊಂಗಲ್ ಆಚರಣೆ ಪ್ರಯುಕ್ತ ತಮಿಳುನಾಡಿನ ಮಧುರೈ ನ ಆವನಿಯಪುರಂ ಪ್ರದೇಶದಲ್ಲಿ ನಡೆದ ಜಲ್ಲಿಕಟ್ಟು ಕ್ರೀಡೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಜಲ್ಲಿ ಕಟ್ಟು ಕ್ರೀಡೆಯಲ್ಲಿ 80 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 38 ಮಂದಿ ಗೂಳಿ ಪಳಗಿಸುವವರು, 24 ಗೂಳಿ ಮಾಲಿಕರು ಹಾಗೂ 18 ಪ್ರೇಕ್ಷಕರು ಸೇರಿದ್ದಾರೆ.

ಕೊಬ್ಬಿದ ಗೂಳಿಗಳನ್ನು ಪಳಗಿಸುವ ಪ್ರಯತ್ನದಲ್ಲಿ ಅನೇಕರು ವಿಫಲಗೊಂಡಿದ್ದು, ಗೂಳಿಗಳು ಅವರನ್ನು ಹಿಮೆಟ್ಟಿಸುತ್ತಾ ಮುಂದಕ್ಕೆ ಓಡಿದವು. ಈ ಸ್ಪರ್ಧೆಯಲ್ಲಿ 80 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.

ಜಲ್ಲಿಕಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಮಾರು 5 ಸಾವಿರಕ್ಕೂ ಹೆಚ್ಚು ಜನ ನೋಂದಾಯಿಸಿಕೊಂಡಿದ್ದರು. ಕೋವಿಡ್ ಕಾರಣದಿಂದ ಈ ಬಾರಿ ಅತಿಥಿಗಳು ಪಾಲ್ಗೊಂಡಿರಲಿಲ್ಲ. ತಮಿಳುನಾಡಿನಲ್ಲಿ ಗೂಳಿ ಕಾಳಗ ಕೇವಲ ಕ್ರೀಡೆ ಮಾತ್ರವಾಗದೆ ಸಂಕ್ರಾಂತಿಯ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆ ಆಗಿದೆ. ಈ ಕ್ರೀಡೆಯ ಆಯೋಜಕರು ಚಿನ್ನ, ಬೆಳ್ಳಿ, ಕಾರುಗಳನ್ನು ಬಹುಮಾನವಾಗಿ ಘೋಷಿಸುತ್ತಾರೆ.

Sneha Gowda

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

10 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

34 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

48 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago