News Karnataka Kannada
Tuesday, April 30 2024
ತಮಿಳುನಾಡು

ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ

Tamil Nadu .
Photo Credit :

ತಂಜಾವೂರು: ಕರ್ನಾಟಕದ ಮೇಕೆದಾಟು ಆಣೆಕಟ್ಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ರೈತರು ತಂಜಾವೂರಿನಲ್ಲಿ ಇಂದು ಒಂದು ದಿನದ ಉಪವಾಸ ಸತ್ಯಗ್ರಹ ಆಚರಿಸಿದರು.
ನಿರಶನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ನ್ಯಾಯಸಮ್ಮತವಲ್ಲ. ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಪರ ನಿಲುವು ವ್ಯಕ್ತಪಡಿಸುತ್ತಾರೆ ಎಂಬ ವಿಶ್ವಾಸವನ್ನು ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಆಣೆಕಟ್ಟು ಯೋಜನೆ ಬೃಹತ್ ಹೋರಾಟದ ಸ್ವರೂಪ ಪಡೆಯುತ್ತಿದೆ. ಉಭಯ ರಾಜ್ಯಗಳಲ್ಲೂ ಇಂದು ಪರ ಮತ್ತು ವಿರೋಧ ಪ್ರತಿಭಟನೆಗಳು ನಡೆದವು.
ಈ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕದಲ್ಲಿ ರೈತ ಸಮುದಾಯ, ವಿವಿಧ ಸಂಘಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು