ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಪ್ರಯಾಣಿಸುತ್ತಿದ್ದ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ರು. ಇನ್ನಿವ್ರು ಸೇನಾ ಕಾಲೇಜಿನಲ್ಲಿ ಸೆಮಿನಾರ್ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದರು.