News Karnataka Kannada
Monday, April 29 2024
ತಮಿಳುನಾಡು

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಬಾಲಕಿಗೆ ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಲತಾಯಿಯೊಬ್ಬಳು ಚಿತ್ರಹಿಂಸೆ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
Photo Credit : IANS

ಚೆನ್ನೈ : ತರಗತಿಯ ಶಿಕ್ಷಕನೊಬ್ಬನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

ಡಿ.ಮುರಳಿಕೃಷ್ಣ (55) ವಿದ್ಯಾರ್ಥಿನಿಗೆ ಕಿರುಕುಳ ನಿಡುತ್ತಿದ್ದ ಶಿಕ್ಷಕ. 7ನೇ ತರಗತಿಯ ವಿದ್ಯಾರ್ಥಿನಿ ಈ ಹಿಂದೆ ಶಿಕ್ಷಕನು ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಎಂದು ತನ್ನ ಪೋಷಕರಿಗೆ ದೂರು ನೀಡಿದ್ದಳು.

ಈ ಹಿಂದೆ ಬಾಲಕಿಯು ಶಿಕ್ಷಕನಿಗೆ ಎಚ್ಚರಿಕೆ ನೀಡಿದ್ದರೂ ಸಹ ಆತ ಅದನ್ನೇ ಮುಂದುವರಿಸಿದ್ದ. ತಂದೆ ತಾಯಿಯರು ಬಾಲಕಿಗೆ ಧೈರ್ಯ ತುಂಬುವ ಬದಲು, ಶಿಕ್ಷಕ ನಿನ್ನ ತಾತನ ವಯಸ್ಸಿನವನಾಗಿದ್ದಾನೆ ಸಹಿಸಿಕೋ ಎಂದು ಹೇಳಿದ್ದರು.

ಪೊಲೀಸರ ಪ್ರಕಾರ, ಬಾಲಕಿಯ ಪೋಷಕರ ಈ ವರ್ತನೆ ಅವಳನ್ನು ತೀವ್ರ ಖಿನ್ನತೆಗೆ ತಳ್ಳಿದ್ದು, ಶನಿವಾರ ತನ್ನ ಮನೆಯಲ್ಲಿ ವಾರ್ನಿಷ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಪೋಷಕರು ಪೊಲೀಸರ ಮೊರೆ ಹೋಗಿದ್ದು, ಪೊಲೀಸರು ಸೋಮವಾರ ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು