News Karnataka Kannada
Monday, April 29 2024
ತಮಿಳುನಾಡು

ಸಿಲಿಂಡರ್ ಸ್ಫೋಟ; 10 ತಿಂಗಳ ಮಗು ಸೇರಿ ಮೂವರು ಪ್ರಾಣಾಪಾಯದಿಂದ ಪಾರು

ತಾಲೂಕಿನ ಕಾರನಹಳ್ಳಿ ಗ್ರಾಮದಲ್ಲಿ ಬೆಂಕಿ ಬಿದ್ದ ಪರಿಣಾಮ ಕೊಟ್ಟಿಗೆಯಲ್ಲಿದ್ದ 9 ಹಸುಗಳು ಮತ್ತು 20 ಮೇಕೆಗಳು ಮೃತಪಟ್ಟಿರುವ ಘಟನೆ ಸಂಭವಿಸಿದೆ.
Photo Credit : IANS

ಚೆನ್ನೈ : ಮನೆಯ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಳ್ಳುವ ವೇಳೆ ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಮಿಳುನಾಡಿನ ಕಲ್ಲಕುರುಚಿ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿರುವುದಾಗಿ ವರದಿ ತಿಳಿಸಿದೆ.

ಕಲ್ಲಕುರುಚಿ ಜಿಲ್ಲೆಯ ಕಲ್ವರಾಯನ ಬೆಟ್ಟದ ತಪ್ಪಲಿನ ಪ್ರದೇಶದಲ್ಲಿರುವ ಬುಡಕಟ್ಟು ನಿವಾಸಿಯ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಮನೆ ಮಾಲೀಕ ರಾಜಾ, ಆತನ ಪತ್ನಿ ಹಾಗೂ ಹತ್ತು ತಿಂಗಳ ಹಸುಗೂಸು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿ ವಿವರಿಸಿದೆ.

ವರದಿಗಳ ಪ್ರಕಾರ, ಕಳೆದ ರಾತ್ರಿ ರಾಜಾ ಪತ್ನಿ ಗ್ಯಾಸ್ ಒಲೆ ಮೇಲೆ ಹಾಲನ್ನು ಇಟ್ಟು ಕುದಿಸುತ್ತಿದ್ದರು. ನಂತರ ಆಕೆ ಪಕ್ಷದ ಮನೆಗೆ ತೆರಳಿದ್ದಳು. ಆದರೆ ಆಕೆ ಗ್ಯಾಸ್ ಒಲೆ ಮೇಲೆ ಹಾಲು ಕುದಿಯುತ್ತಿರುವುದು ಮರೆತು ಬಿಟ್ಟಿದ್ದಳು. ಅದರ ಪರಿಣಾಮ ಹುಲ್ಲಿನ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಅಪಾಯ ಅರಿತ ರಾಜಾ, ಮಗು, ಪತ್ನಿ ಹಾಗೂ ನೆರೆಹೊರೆಯವರು ಮನೆ ಬಿಟ್ಟು ದೂರ ಹೋಗಿದ್ದು, ಅಷ್ಟರಲ್ಲಿ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ಮನೆ ಸುಟ್ಟು ಭಸ್ಮವಾಗಿ ಹೋಗಿರುವುದಾಗಿ ವರದಿ ತಿಳಿಸಿದೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಳ್ಳುವ ಹೊತ್ತಿನಲ್ಲಿ ಯಾರು ಇಲ್ಲದಿದ್ದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು