ಕುನೂರು ಬಳಿ ಹೆಲಿಕಾಪ್ಟರ್ ಪತನಗೊಂಡ ಸ್ಥಳಕ್ಕೆ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಭೇಟಿ ನೀಡಿದ್ದಾರೆ.
ಸೇನಾ ಹೆಲಿಕಾಪ್ಟರ್ ಪತನವಾಗಿ ಬೆಂಕಿ ಉರಿದ ಸ್ಥಳಕ್ಕೆ ತಮ್ಮ ಸಿಬ್ಬಂದಿಯೊಂದಿಗೆ ಚೌಧರಿ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ತಮಿಳುನಾಡು ಪೊಲೀಸ್ ಮಹಾ ನಿರ್ದೇಶಕ ಸಿ.ಶೈಲೇಂದ್ರ ಬಾಬು ವಿ.ಆರ್. ಚೌಧರಿ ಅವರ ಜೊತೆಗಿದ್ದಾರೆ. ನಿನ್ನ ಪತನಗೊಂಡ ಹೆಲಿಕಾಪ್ಟರ್ನಲ್ಲಿ ಸಿಡಿಸಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರರು ಸೇರಿದಂತ 14 ಮಂದಿ ಇದ್ದರು.