ಚೆನ್ನೈ: ನಟಿ ತ್ರಿಷಾ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ AIADMK ಮಾಜಿ ಸದಸ್ಯ ಎವಿ ರಾಜು ಅದಕ್ಕಾಗಿ ಕ್ಷಮೆ ಯಾಚಿಸುತ್ತಾ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದರು.
ತಮ್ಮ ಹೇಳಿಕೆಗೆ ಹಲವು ಕಡೆಗಳಿಂದ ಟೀಕೆಗಳು ಕೇಳಿಬಂದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ʼತ್ರಿಷಾರನ್ನು ಗುರಿಯಾಗಿಸಿಕೊಳ್ಳುವ ಯಾವುದೇ ಉದ್ದೇಶವಿಲ್ಲ. ಅವರ ಭಾವನೆಗಳಿಗೆ ನೋವುಂಟಾಗಿದ್ದರೆ ಕ್ಷಮೆಯಿರಲಿʼ ಎಂದು ವೀಡಿಯೋ ಮೂಲಕ ಕ್ಷಮೆ ಯಾಚಿಸಿದ್ದಾರೆ.
ತ್ರಿಷಾರನ್ನು ಶಾಸಕರ ರೆಸಾರ್ಟ್ಗೆ ಕರೆಸಲಾಯಿತು. ಅದಕ್ಕಾಗಿ ಆಕೆಗೆ ದೊಡ್ಡ ಮೊತ್ತ ನೀಡಲಾಗಿದ್ದು, ಸೇಲಂ ಪಶ್ಚಿಮ ಶಾಸಕ ವೆಂಕಟಾಚಲಂ ಅವರಿಂದ ೨೫ ಲಕ್ಷ ರೂಪಾಯಿ ಪಡೆದಿದ್ದಾರೆ ಎಂಬ ಎವಿ ರಾಜು ಹೇಳಿಯನ್ನು ತಮಿಳುನಾಡು ಫಿಲಂ ಕೌನ್ಸಿಲ್ ಮುಖ್ಯಸ್ಥ, ನಟ ವಿಶಾಲ್ ಟೀಕಿಸಿದ್ದರು. ಇದರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ತ್ರಿಷಾ ಹೇಳುತ್ತಿದ್ದಂತೆ ರಾಜು ತಮ್ಮ ಮಾತಿಗೆ ಕ್ಷಮೆ ಯಾಚಿಸಿದ್ದಾರೆ.