ಚೆನ್ನೈ: ಆಸ್ಕರ್ ಪ್ರಶಸ್ತಿ ಪುರಸ್ಕೃತ ದಿ ಎಲಿಫ್ಯಾಂಟ್ ವಿಸ್ಪರ್ಸ್ ಸಾಕ್ಷ್ಯಚಿತ್ರಕ್ಕೆ ಪ್ರೇರಣೆಯಾಗಿದ್ದ ಬೆಳ್ಳಿ ಅವರನ್ನು ಮೊದಲ ಸರ್ಕಾರಿ ಮಹಿಳಾ ಕಾವಡಿಯಾಗಿ ತಮಿಳುನಾಡು ಸರ್ಕಾರ ನೇಮಕ ಮಾಡಿದೆ. ಸರ್ಕಾರ ತನ್ನ ಹೇಳಿಕೆಯಲ್ಲಿ,ಬೆಳ್ಳಿ ಅವರು ಆನೆ ಮರಿಗಳನ್ನು ಸಾಕಿ-ಸಲಹಿದ ಪರಿಗೆ ಅವರನ್ನು ರಾಜ್ಯದ ಮೊದಲ ಮಹಿಳಾ ಕಾವಡಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.
ಹೀಗಾಗಿ ತಾತ್ಕಾಲಿಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಬೆಳ್ಳಿ, ಈಗ ರಾಜ್ಯದ ಮೊದಲ ಸರ್ಕಾರಿ ಮಹಿಳಾ ಕಾವಡಿಯಾಗಿ ನೇಮಕಗೊಂಡಿದ್ದಾರೆ. ಇವರು ನೀಲಗಿರಿ ಜಿಲ್ಲೆಯಲ್ಲಿರುವ ಮುದುಮಲೈ ಹುಲಿ ಅಭಯಾರಣ್ಯದಲ್ಲಿರುವ ತೆಪ್ಪಕಾಡು ಆನೆ ಬಿಡಾರದಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಇವರಿಗೆ ಮುಖ್ಯಮಂತ್ರಿ ಸ್ಟಾಲಿನ್ ನೇಮಕ ಪತ್ರ ವಿತರಣೆ ಮಾಡಿದ್ದಾರೆ.
ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ಆನೆ ಸಾಕಾಣಿಕೆ ಶಿಬಿರದಲ್ಲಿ ಬೊಮ್ಮನ್ ಮತ್ತು ಬೆಳ್ಳಿ ದಂಪತಿ ಕೆಲಸ ಮಾಡುತ್ತಿದ್ದಾರೆ. 2017ರಲ್ಲಿ ಇವರು ತೆಂಕಣಿಕೊಟ್ಟೈ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟ ಗಂಡು ಆನೆ ಮರಿಯನ್ನು ಕರೆತಂದು ಸಾಕಿದರು. ಇವರ ಸ್ಫೂರ್ತಿದಾಯಕ ಜೀವನವನ್ನು ಸೆರೆ ಹಿಡಿದು ಆಸ್ಕರ್ ಅಂಗಳಕ್ಕೆ ಕೊಂಡೊಯ್ದಿದ್ದು ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್.
ಆಸ್ಕರ್ ಮುಡಿಗೇರಿಸಿಕೊಂಡ ಬಳಿಕ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಎಲಿಫೆಂಟ್ ವಿಸ್ಪರರ್ಸ್ ನ ರಿಯಲ್ ಹೀರೋಗಳಾದ ಬೊಮ್ಮನ್ ಮತ್ತು ಬೆಳ್ಳಿ ದಂಪತಿ ಕೈಗೆ ಪ್ರಶಸ್ತಿ ಇಟ್ಟು ಸಂಭ್ರಮಿಸಿದ್ರು.
Fabulous News. Tmt. Bellie our very own Elephant Whisperer has become the first woman to be appointed as a permanant woman Cavady ( Elephant Care Taker) by the Government of Tamil Nadu, for her selfless & dedicated service in saving precious elephant calves at Theppakau Elephant… pic.twitter.com/Gz6fVMsGZo
— Supriya Sahu IAS (@supriyasahuias) August 2, 2023