News Karnataka Kannada
Wednesday, May 08 2024
ತಮಿಳುನಾಡು

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಸ್‌: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Bus catches fire in the middle of the road, driver's punctuality averts avertment
Photo Credit : Twitter

ಕೊಯಮತ್ತೂರ: ಸಾರಿಗೆ ಇಲಾಖೆಗೆ ಸೇರಿದ ಬಸ್‌ ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ತಮಿಳುನಾಡಿನ ಕರುಮತ್ತಂಪಟ್ಟಿಯಲ್ಲಿ ನಡೆದಿದೆ.

ಸೇಲಂ-ಕೊಚ್ಚಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ಏಕಾಏಕಿ ಬಸ್‌ಗೆ ಬೆಂಕಿ ತಗುಲಿದೆ. ಅನಾಹುತದ ಸಂದರ್ಭದಲ್ಲಿ ಬಸ್‌ನಲ್ಲಿ ಸುಮಾರು 63 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಸಾರಿಗೆ ಬಸ್‌ ಮುಂಭಾಗದಲ್ಲಿ ಹೊಗೆ ಬರುವುದನ್ನು ಗಮನಿಸಿದ ಚಾಲಕ ಕೂಡಲೇ ಎಚ್ಚೆತ್ತುಕೊಂಡಿದ್ದಾನೆ. ತಕ್ಷಣವೇ ಬಸ್ ಚಾಲಕ ಹಾಗೂ ನಿರ್ವಾಹಕರು ತಕ್ಷಣವೇ ಎಲ್ಲಾ 63 ಪ್ರಯಾಣಿಕರನ್ನು ಬಸ್‌ನಿಂದ ಕೆಳಗೆ ಇಳಿಸಿದ್ದಾರೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ಸ್ಪಲ್ಪದರಲ್ಲೇ ತಪ್ಪಿ ಹೋಗಿದೆ. ಕರುಮತ್ತಂಪಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು