ಚೆನ್ನೈ: ಮಿಚಾಂಗ್ ಚಂಡಮಾರುತದಿಂದ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಜೋರು ಮಳೆಯಾಗಿದೆ. ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಎಡಬಿಡದೆ ಸುರಿದ ಭಾರೀ ಮಳೆಯಿಂದ ಕಾಲಿವುಡ್ ಹೀರೋ ವಿಷ್ಣು ವಿಶಾಲ್ ಮನೆಯಿರುವ ಪ್ರದೇಶ ಜಲಾವೃತ್ತಗೊಂಡಿದೆ. ಮನೆಯಿಂದ ಯಾರೂ ಹೊರಬರಲಾರದ ಸ್ಥಿತಿಯಲ್ಲಿದ್ದಾರೆ. ಇದೇ ವೇಳೆ, ಬಾಲಿವುಡ್ ನಟ ಆಮೀರ್ ಖಾನ್ ಅವರು ನಟ ವಿಷ್ಣು ಮನೆಯಲ್ಲೇ ಲಾಕ್ ಆಗಿದ್ದಾರೆ.
ಚೆನ್ನೈನ ಕರಪಾಕ್ಕಂ ಪ್ರದೇಶದಲ್ಲಿರುವ ತಮಿಳು ನಟ ವಿಷ್ಣು ವಿಶಾಲ್ ಮನೆಗೆ ಆಮೀರ್ ಖಾನ್ ಭೇಟಿ ನೀಡಿದ್ದ ವೇಳೆ ಪ್ರವಾಹ ಪರಿಸ್ಥಿತಿಯಿಂದಾಗಿ ವಿಷ್ಣು ವಿಶಾಲ್ ಅವರ ನಿವಾಸದಲ್ಲೇ ಆಮೀರ್ ಖಾನ್ ಸಿಲುಕಿದ್ದರು. ಇದೇ ಸಮಯದಲ್ಲಿ ವಿಷ್ಣು ವಿಶಾಲ್ ಮನೆಯೊಳಗೆ ನೀರು ನುಗ್ಗಿದ್ದರಿಂದ ಸಹಾಯಕ್ಕಾಗಿ ನಟ ವಿಷ್ಣು ವಿಶಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಮೂಲಕ ಮನವಿ ಮಾಡಿದ್ದರು.
ಇದಕ್ಕೆ ಸ್ಪಂದಿಸಿದ ಅಗ್ನಿಶಾಮಕ ದಳ ನಟ ವಿಷ್ಣು ವಿಶಾಲ್ ಮತ್ತು ಆಮೀರ್ ಖಾನ್ ಅವರನ್ನು ರಕ್ಷಿಸಿದ್ದಾರೆ. ಮಿಚಾಂಗ್ ಚಂಡಮಾರುತದಿಂದ ನನ್ನ ಮನೆಯೊಳಗೆ ನೀರು ನುಗ್ಗಿದೆ. ಸಹಾಯಕ್ಕಾಗಿ ಕರೆ ಮಾಡಿದ್ದೇನೆ. ವಿದ್ಯುತ್ ಸಂಪರ್ಕ ಇಲ್ಲ. ವೈಪೈ, ಫೋನ್ ಸಿಗ್ನಲ್ ಇಲ್ಲ. ಇಲ್ಲಿರುವವರ ಸಹಾಯಕ್ಕೆ ಯಾರಾದರೂ ಧಾವಿಸಲಿ ಎಂದು ಬಯಸುತ್ತೇನೆ ಎಂದು ವಿಷ್ಣು ವಿಶಾಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಈ ವಿಷಯ ಅರಿತ, ಅಗ್ನಿಶಾಮಕ ದಳ ವಿಷ್ಣು ಮನೆಗೆ ಧಾವಿಸಿ, ನಟ ವಿಷ್ಣು ಮತ್ತು ಆಮೀರ್ ಖಾನ್ ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ತಂಡಕ್ಕೆ ವಿಷ್ಣು ಮತ್ತು ಆಮೀರ್ ಖಾನ್ ಧನ್ಯವಾದ ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…