ಹೊಸೂರು: ಲಾರಿ ಡಿಕ್ಕಿಯಾಗಿ ದ್ವಿಚಕ್ರವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ಸಂಭವಿಸಿದೆ.
ಅಪಘಾತದ ವೇಳೆ ಮೃತ ದಂಪತಿ ಅನ್ಬು, ಸರಿತಾ ಜೊತೆ ನಾಲ್ಕು ತಿಂಗಳ ಮಗು ಇದ್ದು ಪ್ರಾಣಾಪಾಯದಿಂದ ಪಾರಾಗಿದೆ. ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಲಾರಿ ಚಾಲಕರ ಅಜಾಗರೂಕತೆಯಿಂದಾಗಿ ಈ ಅಪಘಾತ ನಡೆದಿದ್ದು, ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೆದ್ದಾರಿಯಲ್ಲಿ ಏಕಾಏಕಿ ಯುಟರ್ನ್ ತೆಗೆದುಕೊಳ್ಳಲು ಮುಂದಾದ ಟ್ಯಾಂಕರ್ ಚಾಲಕ ದ್ವಿಚಕ್ರ ವಾಹನ ಬರುತ್ತಿರುವುದನ್ನೂ ಲೆಕ್ಕಿಸದೇ ಡಿಕ್ಕಿ ಹೊಡೆದಿದ್ದರಿಂದ ಈ ಅನಾಹುತ ಸಂಭವಿಸಿದೆ.