ಚೆನ್ನೈ: ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ.
ಚೆನ್ನೈನ ಕಾಂಗ್ರೆಸ್ ಭವನದಲ್ಲಿ ಇಂದು ಮನ್ಸೂರ್ ಅಲಿ ಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವ ಪೆರುಂಡಗೈ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಮನ್ಸೂರ್ ಅಲಿ ಖಾನ್ ನಾನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತೇನೆ ಎಂದಿದ್ದಾರೆ.
ತಮಿಳುನಾಡಿನಲ್ಲಿ ಏಪ್ರಿಲ್ 19ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆದಿದೆ. ಮತದಾನ ಮುಗಿದ ಬಳಿಕ ಮನ್ಸೂರ್ ಅಲಿ ಖಾನ್ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮನ್ಸೂರ್ ಅಲಿಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರುವ ಪತ್ರ ಸಲ್ಲಿಸಿದ್ದಾರೆ.
ಚುನಾವಣೆಯ ನಂತರ ಪಕ್ಷ ಸೇರುವ ಪತ್ರವನ್ನು ಸ್ವೀಕರಿಸಲಾಗುವುದು ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.ಕಾಂಗ್ರೆಸ್ ಪಕ್ಷ ಸೇರುವುದಾಗಿ ಘೋಷಿಸಿರುವ ಮನ್ಸೂರ್ ಅಲಿಖಾನ್ ಅವರು ಪ್ರಧಾನಿ ಮೋದಿ ವಿರುದ್ಧ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಷಸರ್ಪ ಇದ್ದ ಹಾಗೆ. ಅವರನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು. ಅವರ ನೇತೃತ್ವದಲ್ಲಿ ಈ ಚುನಾವಣೆ ನ್ಯಾಯಯುತವಾಗಿ ನಡೆಯುವುದಿಲ್ಲ.
ಪ್ರಧಾನಿ ಮೋದಿ ಅವರು ಮನಮೋಹನ್ ಸಿಂಗ್ ಅವರ ಕಾಲಿನ ಧೂಳಿಗೆ ಸಮಾನರಲ್ಲ ಎಂದಿದ್ದಾರೆ. ಮೊದಲು ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ. ಮತ್ತೆ ಮಾತೃ ಪಕ್ಷ ಸೇರಲಿದ್ದೇನೆ. ಇಂಡಿಯನ್ ಡೆಮಾಕ್ರಟಿಕ್ ಟೈಗರ್ಸ್ ಪಾರ್ಟಿಯನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸಲಾಗುವುದು. ಮತ್ತು ಅದರ ಎಲ್ಲಾ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮನ್ಸೂರ್ ಅಲಿ ಖಾನ್ ಮಾಹಿತಿ ನೀಡಿದ್ದಾರೆ.
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…
ಯಮುನೋತ್ರಿ, ಗಂಗೋತ್ರಿ, ಕೇದರ್ನಾಥ್ ಮತ್ತು ಬದರಿನಾಥ್ ಪವಿತ್ರ ಚಾರ್ ಧಾಮ್ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…