News Karnataka Kannada
Sunday, April 28 2024
ತಮಿಳುನಾಡು

ತಮಿಳುನಾಡಿನ ಪಟಾಕಿ ಘಟಕದಲ್ಲಿ ಸ್ಫೋಟ: 10 ಜನರ ದುರ್ಮರಣ

ತಾಲೂಕಿನ ಹಾರೋಬೆಳವಡಿ ಗ್ರಾಮದ ರೈತ ಸಂಗಪ್ಪ ಕಡಲೆ ಎಂಬುವವರಿಗೆ ಸೇರಿದ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗಲು ಅಂದಾಜು 70 ಸಾವಿರ ಮೌಲ್ಯದ ಮೇವು ಸುಟ್ಟ ಕರಕಲಾಗಿದೆ.
Photo Credit : News Kannada

ವಿರುದುನಗರ:  ಪಟಾಕಿ ಘಟಕದ ವಿನ್ನರ್‌ನಲ್ಲಿ ಇಂದು ಹಠಾತ್ ಸ್ಫೋಟ ಸಂಭವಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿ ನಡೆದಿದೆ.

ಈ ಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಕಾರ್ಮಿಕರನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಫೋಟದ ಬಳಿಕ ಹೊತ್ತಿ ಉರಿಯುತ್ತಿರುವ ಪಟಾಕಿ ತಯಾರಿಕಾ ಕಾರ್ಖಾನೆ ಬೆಂಕಿ ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ.

ಈ ಘಟಕವನ್ನು ವಿಜಯ್ ಒಡೆತನದ ಖಾಸಗಿ ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ. ಇದರ ಒಳಗೆ ಸಿಕ್ಕಿಕೊಂಡಿರುವ ಕಾರ್ಮಿಕರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು