ಕೇರಳ, ತಮಿಳುನಾಡಿನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ/ತಿರುವನಂತಪುರ: ಈ ಬಾರಿ ಮಳೆಯಿಲ್ಲದೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಬರದಿಂದ ತತ್ತರಿಸಿವೆ. ಈ ನಡುವೆ ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಬುಧವಾರ ಮತ್ತು ಗುರುವಾರ ಧಾರಾಕಾರ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಎರಡು ರಾಜ್ಯಗಳಿಗೆ ಎಲ್ಲೋ ಅಲರ್ಟ್‌ ಘೋಷಿಸಿದೆ.

ಕೇರಳ ಮತ್ತು ಮಾಹೆಯ ವಿವಿಧ ಭಾಗಗಳಲ್ಲಿ ಗುರುವಾರದವರೆಗೆ ಬಿರುಸಿನ ಮಳೆಯಾಗಲಿದೆ. ಹೀಗಾಗಿ, ಕಟ್ಟೆಚರಿಕೆಯ ಕ್ರಮಗಳನ್ನು ಕೈಗೊಳ್ಳಲು ಪಿಣರಾಯಿ ವಿಜಯನ್‌ ನೇತೃತ್ವದ ಸರಕಾರ ತೀರ್ಮಾನಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಚೆನ್ನೈ ಸಹಿತ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಚೆನ್ನೈಯ ಮೂಲಂಬಾಕಂ ಎಂಬಲ್ಲಿ ಸಬ್‌ವೇಗೆ ಪ್ರವಾಹದ ನೀರು ನುಗ್ಗಿ ಬಸ್‌ ಆಂಶಿಕವಾಗಿ ಮುಳುಗಿತ್ತು. ಕೂಡಲೇ ಚೆನ್ನೈ ಮಹಾನಗರಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸನ್ನು ನೀರಿನಿಂದ ಹೊರಕ್ಕೆಳೆದಿದ್ದಾರೆ.

Ashika S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago