ರಾಮೇಶ್ವರಂ: ಶ್ರಿಲಂಕಾದ ತಲೈಮನ್ನಾರ್ನಿಂದ ತಮಿಳುನಾಡಿನ ರಾಮೇಶ್ವರಂನ ಧನುಷ್ಕೋಡಿಗೆ ಈಜುವ ವೇಳೆ ಬೆಂಗಳೂರಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತರನ್ನು ಗೋಪಾಲ್ ರಾವ್ (78) ಎಂದು ಗುರುತಿಸಲಾಗಿದ್ದು, ಇವರು ಸೆಪ್ಟಜೆನೆರಿಯನ್ ಈಜುಪಟು ಎಂದು ತಿಳಿದು ಬಂದಿದೆ.
ರಿಲೇ ಈಜು ಸ್ಪರ್ಧೆಯಲ್ಲಿ ಗೋಪಾಲ್ ರಾವ್ ಅವರು ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ. ರಿಲೇ ಈಜು ಸ್ಪರ್ಧೆಯ ಭಾಗವಾಗಿ ಸ್ಪರ್ಧಾಳುಗಳು ಶ್ರೀಲಂಕಾದಿಂದ ಪಾಕ್ ಜಲಸಂಧಿಯ ಮೂಲಕ ಭಾರತದತ್ತ ಬರಬೇಕಿತ್ತು. ಏಪ್ರಿಲ್ 22ರಂದು ರಾಮೇಶ್ವರಂನಿಂದ ತಮಿಳುನಾಡಿಗೆ ದೋಣಿಯ ಮೂಲಕ ಹೊರಟು ಈಜುಗಾರರು ಏಪ್ರಿಲ್ 23ರಂದು ತಲೈಮನ್ನಾರ್ನಿಂದ ಧನುಷ್ಕೋಡಿಯತ್ತ ಈಜಲು ಶುರು ಮಾಡಿದರು.
ತಂಡದಲ್ಲಿ ಮೂರನೇ ಈಜುಗಾರನಾಗಿ ಪಾಲ್ಗೊಂಡಿದ್ದ ಗೊಪಾಲ್ ರಾವ್ ಮುಂಜಾನೆ 3 ಗಂಟೆ ಸುಮಾರಿಗೆ ಎದೆನೋವಿನ ಬಗ್ಗೆ ದೂರು ನೀಡಿದರು. ಕೂಡಲೇ ಅವರಿಗೆ ಚಿಕಿತ್ಸೆ ನೀಡಲಾಯಿತಾದರು ಫಲಕಾರಿಯಾಗದೆ ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ. ಗೊಪಾಲ್ ರಾವ್ ಅವರ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆ ಕೂಡಲೇ ಸ್ಪರ್ಧೆಯನ್ನು ರದ್ದು ಪಡಿಸಲಾಯಿತು ಎಂದು ಆಯೋಜಕರು ತಿಳಿಸಿದ್ದಾರೆ..
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…