ವೇದಿಕೆಯಲ್ಲೇ ವಿದ್ಯಾರ್ಥಿಗಳ ಮುಂದೆ ಕ್ಷಮೆ ಯಾಚಿಸಿ ಸಾಷ್ಟಾಂಗ ನಮಸ್ಕಾರ: ವೀಡಿಯೋ ವೈರಲ್

ಚೆನ್ನೈ: ಸೇಲಂನ ಬಾಗಲ್‌ಪಟ್ಟಿಯಲ್ಲಿ ನಡೆಯುತ್ತಿದ್ದ ಸೈಕಲ್ ವಿತರಣಾ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿ ವಿದ್ಯಾರ್ಥಿಗಳ ಸಮ್ಮುಖದಲ್ಲಿ ರಾಜಕೀಯ ಗಲಾಟೆ ನಡೆಯಿತು. ಆ ಬಗ್ಗೆ ಬೇಸರಗೊಂಡ ಶಾಸಕ ಅರುಳ್ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ್ದಾರೆ.

ತಮಗೆ ವೇದಿಕೆಯಲ್ಲಿ ಮಹತ್ವ ಕೊಡದ ಕಾರಣ ಡಿಎಂಕೆ ಪಕ್ಷದ ಸದಸ್ಯರು ಶಾಲೆಯ ಅಧಿಕಾರಿಗಳೊಂದಿಗೆ ವಾಕ್ಸಮರಕ್ಕೆ ಇಳಿದಿದ್ದು, ನಂತರ ಅದು ವಿಕೋಪಕ್ಕೆ ತಿರುಗಿತ್ತು. ಘಟನೆಯ ಹಿನ್ನಲೆಯಲ್ಲಿ ಶಾಸಕ ವಿದ್ಯಾರ್ಥಿಗಳಲ್ಲಿ ಕ್ಷಮೆ ಯಾಚಿಸಿ ಜಗಳವನ್ನು ಕೊನೆಗೊಳಿಸಿದರು.

ಆಡಳಿತ ಪಕ್ಷದವರಾದ ನಮಗೆ ಕಾರ್ಯಕ್ರಮದಲ್ಲಿ ಮಾತಾಡಲು ಅವಕಾಶ ಕೊಡಲಿಲ್ಲವೆಂದು ಡಿಎಂಕೆ ಸಂಸದರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತ, ʼನಾವು ಇರದಿದ್ದರೆ ವಿತರಿಸಲು ಸೈಕಲ್ ಗಳೇ ಇರುತ್ತಿರಲಿಲ್ಲʼ ಎನ್ನುತ್ತ ಪಿಎಂಕೆ ಶಾಸಕ ಅರುಳ್ ರನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಅರುಳ್ ಮಕ್ಕಳ ಕಾರ್ಯಕ್ರಮವನ್ನು ರಾಜಕೀಯ ಮಾಡಬೇಡಿ ಎಂದು ಮನವಿ ಮಾಡಿದರು.

ತಮ್ಮ ನಡತೆಗೆ ಮಕ್ಕಳೆದುರು ಕ್ಷಮೆ ಯಾಚಿಸಿದ ಅರುಳ್, ʼನೀವು ಉತ್ತಮ ಮೌಲ್ಯಗಳನ್ನು ಮತ್ತು ನಡವಳಿಕೆಯನ್ನು ಕಲಿಯುವ ಜಾಗದಲ್ಲಿ ನಾವು ಅನಾಗರೀಕವಾಗಿ ವರ್ತಿಸಿದ್ದಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆʼ ಎಂದವರು ಮಕ್ಕಳ ಮುಂದೆ ನೆಲದ ಮೇಲೆ ಸಾಷ್ಟಾಂಗ ನಮಸ್ಕಾರ ಮಾಡಿದರು.

Maithri S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago