ತಮಿಳುನಾಡು: ಇಂದು (ಫೆ.28) ಪ್ರಧಾನಿ ಮೋದಿ ಅವರು ತೂತುಕುಡಿಯಲ್ಲಿ 17,300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಪ್ರಧಾನಿ ಮೋದಿ ಅವರ ತಮಿಳುನಾಡಿಗೆ ಎರಡು ದಿನಗಳ ಕಾಲ ಕೈಗೊಂಡಿದ್ದಾರೆ. ಇದಕ್ಕೂ ಮುನ್ನ ಕೇರಳ ಹಾಗೂ ಮಾಹಾರಾಷ್ಟ್ರಕ್ಕೂ ಭೇಟಿ ನೀಡಿದ್ದಾರೆ. ಅಲ್ಲಿಯೂ ಅನೇಕ ಕಾರ್ಯಕ್ರಮದಕ್ಕೆ ಚಾಲನೆ ನೀಡಿದ್ದಾರೆ.
ತೂತುಕುಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿದ್ದು, VO ಚಿದಂಬರನಾರ್ ಬಂದರಿನಲ್ಲಿ ಔಟರ್ ಹಾರ್ಬರ್ ಕಂಟೈನರ್ ಟರ್ಮಿನಲ್ಗೆ ಶಂಕುಸ್ಥಾಪನೆ ಮಾಡಿದ್ದಾರೆ. ಈ ಕಂಟೈನರ್ ಟರ್ಮಿನಲ್ VO ಚಿದಂಬರನಾರ್ ಬಂದರನ್ನು ಪೂರ್ವ ಕರಾವಳಿಗೆ ಟ್ರಾನ್ಸ್ಶಿಪ್ಮೆಂಟ್ ಹಬ್ ಆಗಿ ಪರಿವರ್ತಿಸುವತ್ತ ಒಂದು ಹೆಜ್ಜೆಯಾಗಿದೆ ಎಂದು ಹೇಳಲಾಗಿದೆ.
ಇನ್ನು ಈ ಯೋಜನೆಯು ಭಾರತದ ಕರಾವಳಿ ಮತ್ತು ಅನುಕೂಲಕರ ಭೌಗೋಳಿಕ ಸ್ಥಳವನ್ನು ಹತೋಟಿಗೆ ತರಲು ಮತ್ತು ಜಾಗತಿಕ ವ್ಯಾಪಾರ ಕ್ಷೇತ್ರದಲ್ಲಿ ಭಾರತದ ಸ್ಪರ್ಧಾತ್ಮಕ ವ್ಯವಸ್ಥೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಪ್ರಮುಖ ಮೂಲಸೌಕರ್ಯ ಯೋಜನೆ, ಉದ್ಯೋಗ ಸೃಷ್ಟಿ ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಮೋದಿ ಹೇಳಿದ್ದಾರೆ.
ಮಂಗಳವಾರ ಸಂಜೆ 5:15ರ ಸುಮಾರಿಗೆ ಮಧುರೈಗೆ ಆಗಮಿಸಿರುವ ಪ್ರಧಾನಿ ಮೋದಿ ತಮಿಳುನಾಡಿನ ಮಧುರೈನಲ್ಲಿ ‘ಕ್ರಿಯೇಟಿಂಗ್ ದಿ ಫ್ಯೂಚರ್ – ಡಿಜಿಟಲ್ ಮೊಬಿಲಿಟಿ ಫಾರ್ ಆಟೋಮೋಟಿವ್ ಎಂಎಸ್ಎಂಇ ಉದ್ಯಮಿಗಳ ಜತೆಗೆ ಸಂವಾದ ನಡೆಸಿದ್ದಾರೆ.
ಭಾರತೀಯ ವಾಹನ ಉದ್ಯಮದಲ್ಲಿ ಎಂಎಸ್ಎಂಇಗಳನ್ನು ಬೆಂಬಲಿಸಲು ಮತ್ತು ಉನ್ನತೀಕರಿಸಲು ವಿನ್ಯಾಸಗೊಳಿಸಲಾದ ಎರಡು ಪ್ರಮುಖ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.