News Karnataka Kannada
Tuesday, April 30 2024
ತಮಿಳುನಾಡು

ಚೆನ್ನೈ: ಮದುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ ಸಾಧ್ಯತೆ

Wildlife site Bandipur Sanctuary now gets another feather in its cap
Photo Credit : IANS

ಚೆನ್ನೈ: ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ (ಎಂಟಿಆರ್) ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕಾರಣದಿಂದ ಏಪ್ರಿಲ್‌ 6ರಿಂದ 9ರವರೆಗೆ ಶಿಬಿರಕ್ಕೆ ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶವಿರುವುದಿಲ್ಲ.

ಪೊಲೀಸ್ ಇಲಾಖೆಯ ಮಾಹಿತಿಯ ಪ್ರಕಾರ, ಆಸ್ಕರ್ ವಿಜೇತ ಸಾಕ್ಷ್ಯಚಿತ್ರ – ದಿ ಎಲಿಫೆಂಟ್ ವಿಸ್ಪರರ್ಸ್‌ನ ತಾರೆಗಳಾದ ಬೊಮ್ಮನ್ ಮತ್ತು ಅವರ ಪತ್ನಿ ಬೆಲ್ಲಿ ಅವರೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ. ಈ ಅವಧಿಯಲ್ಲಿ ಎಲ್ಲಾ ವಿಶ್ರಾಂತಿ ಗೃಹಗಳು, ಅತಿಥಿ ಗೃಹಗಳು ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚಲಾಗುತ್ತದೆ. ಪ್ರಧಾನಿ ಭೇಟಿ ಕಾರಣ ಏಪ್ರಿಲ್ 6ರಿಂದ 9ರವರೆಗೆ ತೆಪ್ಪಕಾಡು ಆನೆ ಶಿಬಿರ ಬಂದ್ ಆಗಲಿದೆ ಎಂದು ಅರಣ್ಯ ಇಲಾಖೆ ಹೇಳಿದೆ.

ಭದ್ರತಾ ಕಾರಣಗಳಿಗಾಗಿ ಏಪ್ರಿಲ್ 7 ರಿಂದ 9 ರವರೆಗೆ ವಾಹನ ಸಫಾರಿಗಳನ್ನು ಕೂಡ ಬಂದ್‌ ಆಗಲಿದೆ. ತೆಪ್ಪಕಾಡು ಆನೆ ಶಿಬಿರಕ್ಕೆ ಹೋಗುವ ರಸ್ತೆ ದುರಸ್ತಿ ನಡೆಯುತ್ತಿದೆ ಎಂದು ಅಧಿಕಾರಿಗಳು ಐಎಎನ್‌ಎಸ್‌ಗೆ ತಿಳಿಸಿದ್ದಾರೆ. ಏಪ್ರಿಲ್ 8 ಮತ್ತು 9 ರ ನಡುವೆ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಅನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಚೆನ್ನೈಗೆ ಆಗಮಿಸುತ್ತಿದ್ದಾರೆ.

ಚೆನ್ನೈನಿಂದ ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ಪ್ರಧಾನಿ ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು