News Karnataka Kannada
Friday, May 10 2024
ತಮಿಳುನಾಡು

ತ.ನಾಡಿನಲ್ಲಿ ಹೊಸ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ, ಶಂಕುಸ್ಥಾಪನೆ

ಪ್ರಧಾನಿ ಮೋದಿ ಅವರು ತಮಿಳುನಾಡಿನಲ್ಲಿ ಮಂಗಳವಾರ ಒಟ್ಟು 20,140 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿರುವ ಯೋಜನೆಗಳಿಗೆ ಚಾಲನೆ ನೀಡಿ, ಕೆಲವು ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
Photo Credit : News Kannada

ತಿರುಚಿರಪಳ್ಳಿ: ಪ್ರಧಾನಿ ಮೋದಿ ಅವರು ತಮಿಳುನಾಡಿನಲ್ಲಿ ಇಂದು ಒಟ್ಟು 20,140 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿರುವ ಯೋಜನೆಗಳಿಗೆ ಚಾಲನೆ ನೀಡಿ, ಕೆಲವು ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇತ್ತೀಚಿನ ಮಳೆ ಮತ್ತು ಡಿಸೆಂಬರ್ 2023 ರಲ್ಲಿ ರಾಜ್ಯದಲ್ಲಿ ಉಂಟಾದ ಪ್ರವಾಹ ಹಾಗೂ ಅದರಿಂದಾಗ ನಷ್ಟಗಳನ್ನು ಉಲ್ಲೇಖಿಸಿದರು ಮತ್ತು ಸಂತ್ರಸ್ತ ಕುಟುಂಬಗಳ ಸ್ಥಿತಿ ನೋಡಿ ನಾನು ತುಂಬಾ ಭಾವುಕನಾಗಿದ್ದೇನೆ ಎಂದರು. ಈ ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡಿನ ಜನರೊಂದಿಗೆ ನಿಂತಿದೆ. ನಾವು ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಿ ಮೋದಿ ಅವರು ತಮಿಳುನಾಡಿನಲ್ಲಿ ವೈಮಾನಿಕ ಮತ್ತು ಬಂದರುಗಳು, ರೈಲ್ವೆ, ಹೆದ್ದಾರಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಪರಮಾಣು ಶಕ್ತಿ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ 20 ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಮಾಡಿದರು ಮತ್ತು ಉದ್ಘಾಟಿಸಿದರು. ಇತ್ತೀಚಿಗಷ್ಟೇ ನಿಧನರಾದ ಡಿಎಂಡಿಕೆ ನಾಯಕ ಹಾಗೂ ನಟ ವಿಜಯಕಾಂತ್ ಅವರು ಚಿತ್ರರಂಗ ಮತ್ತು ರಾಜಕೀಯ ಎರಡರಲ್ಲೂ ‘ಕ್ಯಾಪ್ಟನ್’ ಆಗಿದ್ದರು ಎಂದು ಮೋದಿ ಹೇಳಿದರು. ನಾಯಕರಾಗಿ, ರಾಜಕೀಯದಲ್ಲಿ ವಿಜಯಕಾಂತ್ ಅವರು ಯಾವಾಗಲೂ ಎಲ್ಲಕ್ಕಿಂತ ಹೆಚ್ಚಾಗಿ ರಾಷ್ಟ್ರೀಯ ಹಿತಾಸಕ್ತಿಯನ್ನು ಹೊಂದಿದ್ದಾರೆ ಎಂದು ಪ್ರಧಾನಿ ಸ್ಮರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು